Advertisement

ಪಂಜಾಬ್‌: ಅಧಿಕಾರಿಗಳನ್ನು ಒತ್ತೆಯಾಳು ಮಾಡಿಕೊಂಡ ರೈತರು

08:41 PM Mar 29, 2022 | Team Udayavani |

ಚಂಢೀಗಡ: ಬೆಳೆ ಹಾನಿಗೆ ಪರಿಹಾರ ನೀಡಲು ಒತ್ತಾಯಿಸಿ ರೈತ ಸಂಘಟನೆಯೊಂದು 12 ಸರ್ಕಾರಿ ಅಧಿಕಾರಿಗಳನ್ನು ಕೆಲ ಗಂಟೆಗಳ ಕಾಲ ಒತ್ತೆಯಲ್ಲಿರಿಸಿಕೊಂಡ ಘಟನೆ ಪಂಜಾಬ್‌ನಲ್ಲಿ ನಡೆದಿದೆ.

Advertisement

ಪಂಜಾಬ್‌ನ  ಲಂಬಿ ಪ್ರದೇಶದ ಉಪ ತಹಶೀಲ್ದಾರರ ಕಚೇರಿಯಲ್ಲಿ ಇಂತಹ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆಯೇ ರೈತ ಸಂಘಟನೆಯೊಂದರ 100ಕ್ಕೂ ಅಧಿಕ ರೈತರು ಕಚೇರಿಯ ಎದುರು ಪ್ರತಿಭಟನೆ ನಡೆಸಿದ್ದಾರೆ.

ಹತ್ತಿ ಬೆಳೆ ಹಾನಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ. ಸಂಜೆಯ ವೇಳೆ ಕಚೇರಿಯೊಳಗೆ ನುಗ್ಗಿದ ರೈತರು, ಅಧಿಕಾರಿಗಳನ್ನು ಒತ್ತೆಯಲ್ಲಿರಿಸಿಕೊಂಡಿದ್ದಾರೆ.

ಇದನ್ನೂ ಓದಿ:ಧರ್ಮಾಪುರದಲ್ಲಿ ಮಾರಮ್ಮದೇವರ ಉತ್ಸವ : ತಂಬಿಟ್ಟು ಆರತಿ ಹೊತ್ತು ಸಾಗಿಬಂದ ಹೆಂಗಳೆಯರು

ಈ ವಿಚಾರ ಪೊಲೀಸರಿಗೆ ತಿಳಿದುಬಂದಿದ್ದು, ಸ್ಥಳಕ್ಕೆ ಬಂದ ಪೊಲೀಸರು ಸೋಮವಾರ ಮಧ್ಯ ರಾತ್ರಿ ಹೊತ್ತಿಗೆ ಅಧಿಕಾರಿಗಳನ್ನು ರಕ್ಷಿಸಿದ್ದಾರೆ. ಅಧಿಕಾರಿಗಳನ್ನು ಒತ್ತೆಯಾಳಾಗಿಸಿಕೊಂಡದ್ದನ್ನು ಖಂಡಿಸಿ ಮಂಗಳವಾರ ತೆರಿಗೆ ಇಲಾಖೆಯ ಅಧಿಕಾರಿಗಳು ಪ್ರತಿಭಟನೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next