Advertisement

ಬ್ಯಾರಿಕೇಡ್ ಮುರಿದವರು ನಾವಲ್ಲ : ಸಂಯುಕ್ತ ಕಿಸಾನ್ ಮೋರ್ಚಾ

12:35 PM Jan 26, 2021 | Team Udayavani |

ನವ ದೆಹಲಿ : ಸಿಂಘು ಮತ್ತು ಟಿಕ್ರಿ ಗಡಿ ಕೇಂದ್ರ ಭಾಗದಲ್ಲಿ ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನಾ ನಿರತ ಸಾವಿರಾರು ರೈತರು ಟ್ರ್ಯಾಕ್ಟರ್ ಪರೇಡ್ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸುವಾಗ ಪೊಲೀಸರ ಬ್ಯಾರಿಕೇಡ್ ಗಳನ್ನು ಮುರಿದು ಬಂದಿದ್ದಾರೆ ಎಂದು ವರದಿಯಾಗಿದೆ.

Advertisement

ರಾಜ್‌ಪತ್‌ ನಲ್ಲಿ ನಡೆದ ಗಣರಾಜ್ಯೋತ್ಸವದ ಮೆರವಣಿಗೆ ಮುಕ್ತಾಯಗೊಂಡ ನಂತರ ದೆಹಲಿಯಲ್ಲಿ ತಮ್ಮ ಟ್ರ್ಯಾಕ್ಟರ್ ಪೆರೇಡ್ ನಡೆಸಲು ಅನುಮತಿ ನೀಡಲಾಗಿದೆ ಎಂದು ಭದ್ರತಾ ಸಿಬ್ಬಂದಿ ರೈತರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದರೂ ಕೂಡ ರೈತರು ಕೇಳದೇ ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿದು ಹೊರ ರಿಂಗ್ ರೋಡ್ ನತ್ತ ಸಾಗಲು ಪ್ರಯತ್ನಿಸಿದರು” ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಓದಿ : ಪ್ರಚೋದನೆಯಿಂದ ರೈತರ ಪರೇಡ್ ನಡೆದಿದೆ: ಬಿ.ಸಿ ಪಾಟೀಲ್

ಬ್ಯಾರಿಕೇಡ್‌ ಗಳನ್ನು ಮುರಿದವರು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಗೆ ಸೇರಿದವರು. ಪೊಲೀಸರು ರೈತರಿಗೆ ಅನುವು ಮಾಡಿಕೊಟ್ಟ ನಂತರ ಸಂಯುಕ್ತ ಕಿಸಾನ್ ಮೋರ್ಚಾದ ಟ್ರ್ಯಾಕ್ಟರ್ ಪರೇಡ್ ನಿಗದಿಯಂತೆ ಪ್ರಾರಂಭವಾಗಲಿದೆ ಎಂದು  ದೆಹಲಿಯ ಹಲವಾರು ಗಡಿ ಕೇಂದ್ರಗಳಲ್ಲಿ ಮೂರು ಕೇಂದ್ರ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆಯನ್ನು ಮುನ್ನಡೆಸುತ್ತಿರುವ 41  ರೈತ ಸಂಘಗಳ ಒಕ್ಕೂಟ “ಸಂಯುಕ್ತ ಕಿಸಾನ್ ಮೋರ್ಚಾ”ದ ಸದಸ್ಯರೊಬ್ಬರು ಹೇಳಿದ್ದಾರೆ.

ಓದಿ : ಟಿಕ್ ಟಾಕ್ ಸೇರಿ ಚೀನಾ ಮೂಲದ 59 ಅಪ್ಲಿಕೇಶನ್ ಗಳಿಗೆ ಶಾಶ್ವತ ನಿಷೇಧ

Advertisement

ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯು ಗಣರಾಜ್ಯೋತ್ಸವದಂದು ದೆಹಲಿಯ ಕಾರ್ಯನಿರತ ಹೊರ ರಿಂಗ್ ರೋಡ್ ನಲ್ಲಿ ತಮ್ಮ ಮೆರವಣಿಗೆಯನ್ನು ನಡೆಸುವುದಾಗಿ ಸೋಮವಾರ(ಜ.25)  ಘೋಷಿಸಿತ್ತು. ಮಾತ್ರವಲ್ಲದೇ, ಫೆಬ್ರವರಿ 1 ರಂದು ವಾರ್ಷಿಕ ಬಜೆಟ್ ಮಂಡಿಸುವ ಸಂದರ್ಭದಲ್ಲಿ ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಒತ್ತಾಯಿಸಲು ಸಂಸತ್ತಿಗೆ ಪಾದ ಯಾತ್ರೆಯನ್ನು ಕೂಡ ಮಾಡುತ್ತೇವೆ ಎಂದು ಘೋಷಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಿಂಘು, ಟಿಕ್ರಿ ಮತ್ತು ಗಾಜಿಪುರ ಗಡಿ ಕೇಂದ್ರಗಳಿಂದ ದೆಹಲಿಗೆ ತೆರಳಲಿರುವ ‘ಕಿಸಾನ್ ಗಣತಂತ್ರ ಮೆರವಣಿಗೆ’ಯನ್ನು ಗಮನದಲ್ಲಿಟ್ಟುಕೊಂಡು ಭಾರಿ ಭದ್ರತೆಯನ್ನು ನಿಯೋಜಿಸಲಾಗಿದೆ.

ಓದಿ :  ಕೇಂದ್ರದ ನೂತನ ಮೂರು ಕೃಷಿ ಕಾಯ್ದೆ ಮಹಾರಾಷ್ಟ್ರದಲ್ಲಿ ಜಾರಿಗೊಳಿಸಲ್ಲ: ಸ್ಪೀಕರ್ ಪಟೋಲೆ

 

 

 

 

Advertisement

Udayavani is now on Telegram. Click here to join our channel and stay updated with the latest news.

Next