Advertisement

ಪಂಪ್‌ಸೆಟ್‌ ಉಳಿಸಿಕೊಳ್ಳಲು ರೈತರ ಹರಸಾಹಸ

11:29 PM Oct 23, 2019 | Lakshmi GovindaRaju |

ಸುರಪುರ: ನಾರಾಯಣಪುರ ಜಲಾಶಯದಿಂದ 3.72 ಲಕ್ಷ ಕ್ಯೂಸೆಕ್‌ ನೀರು ಬಿಡುತ್ತಿರುವುದರಿಂದ ಯಾದಗಿರಿ ಜಿಲ್ಲೆ ಸುರಪುರ, ಶಹಾಪುರ ಭಾಗದ ಜನ ತತ್ತರಿಸಿ ಹೋಗಿದ್ದಾರೆ. ನದಿ ಪಾತ್ರದಲ್ಲಿ ಅಳವಡಿಸಿದ್ದ ಬಹುತೇಕ ಪಂಪ್‌ಸೆಟ್‌ಗಳು ಕೊಚ್ಚಿ ಹೋಗುತ್ತಿದ್ದು, ಇವುಗಳನ್ನು ಉಳಿಸಿಕೊಳ್ಳಲು ಅಲ್ಲಲ್ಲಿ ಮರಗಳಿಗೆ ಹಗ್ಗ ಕಟ್ಟಿ ರೈತರು ಹರಸಾಹಸ ಪಡುತ್ತಿದ್ದಾರೆ.

Advertisement

ಶೆಳ್ಳಗಿ ಮಂಟಪದ ದೇವಸ್ಥಾನಗಳು ಮುಳುಗಡೆಯಾಗಿವೆ. ನಾರಾಯಣಪುರ ಛಾಯಾ ಭಗವತಿ ದೇವಸ್ಥಾನಕ್ಕೆ ನೀರು ನುಗ್ಗಿದ್ದು, ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ. ಸುರಪುರ ನಗರಕ್ಕೆ ನೀರು ಪೂರೈಸುವ ಜಾಕ್‌ವೆಲ್‌ ಮುಳುಗಡೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next