Advertisement

ನಾಡಿದ್ದು ದಿಲ್ಲಿ ಹೋರಾಟ ಬೆಂಬಲಿಸಿ ರೈತರ ಆಕ್ರೋಶ ದಿನಾಚರಣೆ: ಕುರುಬೂರು

07:28 PM Mar 09, 2024 | Team Udayavani |

ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮಾ.12ರಂದು ರಾಜ್ಯಾದ್ಯಂತ ಪಂಜಿನ ಪ್ರತಿಭಟನೆ, ರೈತರ ಆಕ್ರೋಶ ದಿನ ಆಚರಣೆ ಮಾಡಲಾಗುತ್ತಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ತಿಳಿಸಿದರು.

Advertisement

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಅವರು, ಪಂಜಾಬ್‌, ಹರಿಯಾಣ ರೈತರು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಜಾರಿಗಾಗಿ ಹೋರಾಟ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸದೆ ಪೊಲೀಸ್‌ ಬಲದ ಮೂಲಕ ಚಳವಳಿ ಹತ್ತಿಕ್ಕುತ್ತಿದೆ.

ರೈತರ ಜತೆಗೆ ಸಭೆ ನಡೆಸಿದ ನಾಟಕವಾಡಿ ಸಮಸ್ಯೆ ಬಗೆಹರಿಸದೆ ನಿರ್ಲಕ್ಷಿಸುತ್ತಿದೆ. ಇದರ ವಿರುದ್ಧ ಸಂಯುಕ್ತ ಕಿಸಾನ್‌ ಮೋರ್ಚಾ ರೈತ ಸಂಘಟನೆಯ ಹೋರಾಟ ಬೆಂಬಲಿಸಲು ಮಾ.12ರಂದು ರಾಜ್ಯಾದ್ಯಂತ ಪಂಜಿನ ಪ್ರತಿಭಟನೆ, ರೈತರ ಆಕ್ರೋಶ ದಿನ ಆಚರಿಸಲು ತೀರ್ಮಾನಿಸಲಾಗಿದೆ.

ಎಲ್ಲ ಜಿಲ್ಲೆಗಳಲ್ಲಿ ರೈತ ಸಂಘಟನೆಗಳು ಪಂಜಿನ ಪ್ರತಿಭಟನಾ ಮೆರವಣಿಗೆ ನಡೆಸಲಿವೆ. ಮಾ.15ರ ನಂತರ ಧಾರವಾಡದಲ್ಲಿ ಟ್ರ್ಯಾಕ್ಟರ್‌ ರ್‍ಯಾಲಿ ನಡೆಸಿ ಚಳವಳಿ ತೀವ್ರಗೊಳಿಸಲು ನಿರ್ಧರಿಸಲಾಗಿದೆ ಎಂದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next