Advertisement

ಅಧಿಕಾರಿಗಳ ವರ್ತನೆಗೆ ರೈತರ ಆಕ್ರೋಶ

05:55 PM Dec 01, 2021 | Team Udayavani |

ರಬಕವಿ-ಬನಹಟ್ಟಿ: ಜಿಲ್ಲೆಯ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಅಧಿಕಾರಿಗಳು ರೈತರ ಬಗ್ಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ರೈತರ ಕಬ್ಬಿನ ಬಿಲ್‌ ಪಾವತಿಸದೆ ನಾಲ್ಕು ವರ್ಷವಾದರೂ ಯಾವುದೇ ಪರಿಹಾರ ಕೊಡಿಸುವಲ್ಲಿ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಿಲ್ಲ. ರೈತರು ಪ್ರತಿಭಟನೆ ನಡೆಸುತ್ತಿರುವ ಮಾಹಿತಿ ಜಿಲ್ಲೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಇದ್ದರೂ ಸಮರ್ಪಕವಾದ ಉತ್ತರ ನೀಡಿಲ್ಲ ಎಂದು ರೈತ ಮುಖಂಡ ಮುತ್ತಪ್ಪ ಕೋಮಾರ ಆರೋಪಿಸಿದರು.

Advertisement

ಮಂಗಳವಾರ ಸ್ಥಳೀಯ ತಹಶೀಲ್ದಾರ್‌ ಕಾರ್ಯಾಲಯದ ಎದುರು ಹೋರಾಟ ನಿರತ ರೈತರನ್ನು ಉದ್ದೇಶಿಸಿ ಅವರು ಮಾತನಾಡಿದರು. ಮತ್ತೋರ್ವ ರೈತ ಮುಖಂಡ ಗಂಗಾಧರ ಮೇಟಿ ಮಾತನಾಡಿ, ನಾಲ್ಕು ವರ್ಷಗಳಿಂದ ತೇರದಾಳದ ಸಾವರಿನ್‌ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರು ಹೋರಾಟ ಮಾಡುತ್ತಿದ್ದಾರೆ.

ಅಂದಾಜು 900 ರೈತರ 22 ಕೋಟಿ ರೂ. ಹಣ ಬರಬೇಕಾಗಿದೆ. ಬಿಲ್‌ ಪಾವತಿಸುವ ವಿಷಯ ನ್ಯಾಯಾಲಯದಲ್ಲಿದೆ. ಸಕ್ಕರೆ ಕಾರ್ಖಾನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ಆದರೂ ಎರಡು ದಿನಗಳಿಂದ ಜನರು ಸಕ್ಕರೆ ಕಾರ್ಖಾನೆ ಸ್ವತ್ಛಗೊಳಿಸುತ್ತಿದ್ದಾರೆ. ಇದು ಕಾನೂನಿಗೆ ವಿರೋಧವಾಗಿದೆ. ಪರವಾನಗಿ ಇಲ್ಲದೆ ಸಕ್ಕರೆ ಕಾರ್ಖಾನೆಯನ್ನು ಸ್ವತ್ಛಗೊಳಿಸುತ್ತಿರುವ ವ್ಯಕ್ತಿಗಳ ಮೇಲೆ ಸೂಕ್ತ ಕಾನೂನು ಕ್ರಮವನ್ನು ಅಧಿಕಾರಿಗಳು ತೆಗೆದುಕೊಳ್ಳಬೇಕು. ಸಕ್ಕರೆ ಕಾರ್ಖಾನೆಯನ್ನು ಸ್ವತ್ಛಗೊಳಿಸುತ್ತಿರುವವರ ಮಾಹಿತಿ ಅಧಿಕಾರಿಗಳಿಗೆ ಇದ್ದರೂ ಯಾವುದೆ ಕ್ರಮ ತೆಗೆದುಕೊಳ್ಳುತ್ತಿಲ್ಲ. ಈ ಕುರಿತು ರೈತರಿಗೆ ಮಾಹಿತಿ ನೀಡಿಲ್ಲ ಎಂದರು.

ಮತ್ತೋರ್ವ ಮುಖಂಡ ಶ್ರೀಕಾಂತ ಘೂಳನ್ನವರ ಮಾತನಾಡಿ, ಬಿಲ್‌ ಪಾವತಿಸುವಂತೆ ಈ ಭಾಗದ ರೈತರು ನಾಲ್ಕು ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಕಬ್ಬು ಪೂರೈಸಿದ ರೈತರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಅಧಿಕಾರಿಗಳು ಸಮರ್ಪಕ ಉತ್ತರ ನೀಡುವವರೆಗೂ ಅನಿರ್ದಿಷ್ಟಾವಧಿ ಹೋರಾಟ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಪ್ರತಿಭಟನೆಯಲ್ಲಿ ಹೊನ್ನಪ್ಪ ಬಿರಡಿ, ಭುಜಬಲಿ ಕೆಂಗಾಲಿ, ಶಿಪಪ್ಪ ಹೋಟಕಾರ, ಮಗೆಪ್ಪ ತೇರದಾಳ, ಅರವಿಂದ ದಳವಾಯಿ, ಬಸು ಮಲೋಡಿ, ಮಾಯಪ್ಪ ತುರಾದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next