Advertisement

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

12:14 PM Feb 29, 2020 | Team Udayavani |

ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಶುಕ್ರವಾರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

Advertisement

ಭತ್ತಕ್ಕೆ ಬೆಂಬಲ ಬೆಲೆ ನೀಡಿ ಸರಕಾರ ಖರೀದಿಗೆ ಮುಂದಾಗಬೇಕು, ಗ್ರಾಮೀಣ ಪ್ರದೇಶಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಬೇಕು, ಎಲ್ಲ ಗ್ರಾಮಗಳನ್ನು ಮದ್ಯ ಮುಕ್ತಗೊಳಿಸಬೇಕು, ರೈತರ ಎಲ್ಲ ಸಾಲ ಮನ್ನಾ ಮಾಡಬೇಕು, ಪ್ರತಿ ಮೂರು ತಿಂಗಳಿಗೊಮ್ಮೆ ತಹಶೀಲ್ದಾರ್‌ ಅಧ್ಯಕ್ಷತೆಯಲ್ಲಿ ರೈತರ ಸಭೆ ಕರೆದು ರೈತರ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಬೇಕು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.

ಕಲ್ಮೇಶ ಲಿಗಾಡಿ, ಚಂದ್ರಶೇಖರ ಕಬ್ಬೂರ, ರಮೇಶ ಕಿತ್ತೂರ, ಮಹಾದೇವಪ್ಪ ಹುಲಕೊಪ್ಪ, ಶಂಕ್ರಪ್ಪ ಸಂಗಳದ, ಹನುಮಂತಪ್ಪ ಅರಿವಾಳ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next