Advertisement

ಕೃಷಿ ಅಧಿಕಾರಿಗಳ ವಿರುದ್ಧ ರೈತರ ಪ್ರತಿಭಟನೆ

02:16 PM Jun 16, 2019 | Suhan S |

ಬ್ಯಾಡಗಿ: ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗದ ಕೃಷಿ ಇಲಾಖೆ ಅಧಿಕಾರಿಗಳ ವರ್ತನೆಗೆ ಬೇಸತ್ತ ರೈತರು ಹಾಗೂ ಸಾರ್ವಜನಿಕರು ಕಚೇರಿ ಎದುರು ಪ್ರತಿಭಟಿಸಿದರು.

Advertisement

ಬಿತ್ತನೆ ಬೀಜ ಸೇರಿದಂತೆ ಕೃಷಿ ಪರಿಕರ ಹಾಗೂ ಇನ್ನಿತರ ಕಾರ್ಯಗಳಿಗೆ ಬೆಳಗ್ಗೆ 10:20ಕ್ಕೆ ಕಚೇರಿಗೆ ಆಗಮಿಸಿದ್ದ ರೈತರಿಗೆ ಕಚೇರಿಯಲ್ಲಿ ಡಿ. ದರ್ಜೆ ನೌಕರರನ್ನು ಬಿಟ್ಟರೆ ಯಾರೊಬ್ಬರೂ ಇರದೇ ಇರುವುದು ಶಾಕ್‌ ನೀಡಿತ್ತು. ಈಗ ಬರುತ್ತಾರೆ ಆಗ ಬರುತ್ತಾರೆ ಎಂದು ಕಾದುಕುಳಿತವರಿಗೆ 11.40ಗಂಟೆಯಾದರೂ ಕೃಷಿ ಅಧಿಕಾರಿ ಸೇರಿದಂತೆ ಯಾವೊಬ್ಬ ಅಧಿಕಾರಿಯೂ ಕಚೇರಿಗೆ ಬರದೇ ಇರುವುದು ರೈತರನ್ನು ಮತ್ತಷ್ಟು ಕೆರಳುವಂತೆ ಮಾಡಿತು. ದೂರವಾಣಿ ಮೂಲಕ ಕರೆ ಮಾಡಿ ವಿಚಾರಿಸಿದಾಗಲೂ ಹಾರಿಕೆ ಉತ್ತರ ನೀಡಿದ್ದರಿಂದ ರೈತರ ಆಕ್ರೋಶದ ಕಟ್ಟೆ ಒಡೆಯಿತು.

ಕೃಷಿ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತ ಕಚೇರಿ ಎದುರು ರೈತರು ಪ್ರತಿಭಟಿಸಿದರು. ರೈತ ರಹಮತ ಹಿತ್ತಲಮನಿ ಮಾತನಾಡಿ, ಈಗಾಗಲೇ ಗೋವಿನಜೋಳ ಬಿತ್ತನೆ ಮಾಡಿದ್ದು ಉಳಿದ 3 ಎಕರೆಯಲ್ಲಿ ಶೇಂಗಾ ಬಿತ್ತನೆ ಬೀಜಕ್ಕಾಗಿ ವಾರದಿಂದ ಅಲೆದಾಡುತ್ತಿದ್ದೇನೆ. 3 ದಿನಗಳಿಂದ ಕಚೇರಿಗೆ 10.30ಕ್ಕೆ ಬರುತ್ತಿದ್ದೇನೆ. ಯಾವೊಬ್ಬ ಅಧಿಕಾರಿಯೂ ಸಮಯಕ್ಕೆ ಸರಿಯಾಗಿ ಹಾಜರಾಗುತ್ತಿಲ್ಲ. ಪ್ರಶ್ನಿಸಿದರೆ ನಮ್ಮ ಮೇಲೆಯೇ ದಬ್ಟಾಳಿಕೆ ನಡೆಸುತ್ತಿದ್ದಾರೆ. ಇಂಥ ಬೇಜವಾಬ್ದಾರಿ ಅಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಕೂಡಲೇ ಜಿಲ್ಲಾ ಕೃಷಿ ಅಧಿಕಾರಿಗಳು ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ದರೇ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next