Advertisement
ರಾಜ್ಯಪಾಲರ ಜತೆ ಚರ್ಚಿಸಲು ಅವಕಾಶ ನೀಡದ ಕಾರಣ ಅಹೋರಾತ್ರಿ ಧರಣಿ ಮುಂದುವರಿಸಿರುವ ರೈತರ ಪ್ರತಿಭಟನೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ರೈತರು ನೀಡಿರುವ ಅಂತಿಮ ಗಡುವಿನ ಪ್ರಕಾರ ಡಿಸಿಎಂ ಕಾರಜೋಳ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭೇಟಿಯಾಗಿದ್ದಾರೆ.
Related Articles
Advertisement
ಮಹದಾಯಿ ವಿಚಾರದಲ್ಲಿ ರಾಷ್ಟ್ರಪತಿ, ರಾಜ್ಯಪಾಲರು ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದ ಡಿಸಿಎಂ ಗೋವಿಂದ ಕಾರಜೋಳ ಅವರು ಮನವೊಲಿಸಲು ನಡೆಸಿದ ಸಂಧಾನ ವಿಫಲವಾಗಿದೆ.
ರಾಜ್ಯಪಾಲರ ಭೇಟಿಗೆ ಅವಕಾಶ ಕೊಡಿಸುವಂತೆ ರೈತರು ಪಟ್ಟು ಹಿಡಿದಾಗ, ಕಾರಜೋಳ ಅವರು ರಾಜ್ಯಪಾಲರ ಕಾರ್ಯದರ್ಶಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಆದರೆ ರಾಜ್ಯಪಾಲರ ಭವನದಿಂದ ಯಾವುದೇ ಪ್ರತಿಕ್ರಿಯೆ ಬಾರದಿರುವುದನ್ನು ಗಮನಿಸಿದ ಗೋವಿಂದ ಕಾರಜೋಳ ಅವರು ಪ್ರತಿಭಟನಾ ಸ್ಥಳದಿಂದ ತೆರಳಿರುವುದಾಗಿ ವರದಿ ತಿಳಿಸಿದೆ.