Advertisement

ಹಾಲಿನ ದರ ಕಡಿತಕ್ಕೆ ರೈತ ಸಂಘ ಆಕ್ರೋಶ

08:29 AM Aug 04, 2020 | Suhan S |

ಶಿಡ್ಲಘಟ್ಟ: ಹಾಲಿನ ದರ ಕಡಿತಗೊಳಿಸಿರುವ ಹಾಲು ಒಕ್ಕೂಟದ ಮಹಾಮಂಡಳಿ ಆಡಳಿತ ಮಂಡಳಿಯ ನಿರ್ಧಾರ ಖಂಡಿಸಿ ರೈತ ಸಂಘ ಹಾಗೂ ಹಸಿರು ಸೇನೆ (ದಿ. ಪುಟ್ಟಣ್ಣಯ್ಯ ಬಣ) ಕಾರ್ಯಕರ್ತರು ನಂದಿಕ್ರಾಸ್‌ನ ಮೆಗಾ ಡೇರಿಯ ಮುಂದೆ ಪ್ರತಿಭಟನೆ ನಡೆಸಿದರು.

Advertisement

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆ ನೀರು ಆಶ್ರಯಿಸಿಕೊಂಡ ರೈತರು ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಹಾಲು ಒಕ್ಕೂಟ ಆಡಳಿತ ಮಂಡಳಿ, ಲೀಟರ್‌ ಹಾಲಿಗೆ 4 ರೂ. ಕಡಿತಗೊಳಿಸಿ ರೈತರಿಗೆ ಗಾಯದ ಮೇಲೆ ಬರೆ ಎಳೆದಿದೆ ಎಂದು ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಟಿ.ಲಕ್ಷ್ಮಿನಾರಾಯಣರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಮತ್ತು ಹಾಲು ಒಕ್ಕೂಟ ಆಡಳಿತ ಮಂಡಳಿ ನಿರ್ದೇಶಕರು ಕೂಡಲೇ ಹಾಲಿನ ದರ ಕಡಿತಗೊಳಿಸಿರುವ ಆದೇಶ ಹಿಂಪಡೆಯಬೇಕೆಂದು ಎಂದಿನಂತೆ 4 ರೂ.ಸೇರಿಸಿ ಹಾಲು ಖರೀದಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಉಪಾಧ್ಯಕ್ಷ ಯಾಖೂಬ್‌ ಶರೀಫ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟ ಸ್ವಾಮಿ,ಉಪಾಧ್ಯಕ್ಷ ಟಿ.ಕೆ.ಅರುಣ್‌ಕುಮಾರ್‌, ಶಿಡ್ಲ ಘಟ್ಟದ ರವಿಪ್ರಕಾಶ್‌ ಹಾಗೂ ವಿವಿಧ ತಾಲೂಕುಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next