Advertisement

INDIA ಮೈತ್ರಿಕೂಟಕ್ಕೆ ಆಘಾತ! ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ಎಂದ ಫಾರೂಕ್ ಅಬ್ದುಲ್ಲಾ

04:20 PM Feb 15, 2024 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ದೊಡ್ಡ ಹಿನ್ನಡೆಯಾಗುವ ಲಕ್ಷಣಗಳು ಎದುರಾಗಿದೆ. ಸೀಟು ಹಂಚಿಕೆಯ ಚರ್ಚೆಯ ನಡುವೆ, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷವು ಎಲ್ಲಾ ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಗುರುವಾರ ಹೇಳಿದ್ದಾರೆ ಮತ್ತು ಭವಿಷ್ಯದಲ್ಲಿ ಅವರು ಬಿಜೆಪಿ ನೇತೃತ್ವದ ಎನ್‌ಡಿಎಗೆ ಮತ್ತೆ ಸೇರಬಹುದು ಎಂದು ಸುಳಿವು ನೀಡಿದ್ದಾರೆ.

Advertisement

ಈ ಕುರಿತು ಹೇಳಿಕೆ ನೀಡಿದ ಅವರು ನ್ಯಾಷನಲ್ ಕಾನ್ಫರೆನ್ಸ್ ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳದೆ ತನ್ನ ಅರ್ಹತೆಯ ಮೇರೆಗೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಫಾರೂಕ್ ಅಬ್ದುಲ್ಲಾ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಮಾತನಾಡಿ, ‘ವಿವಿಧ ಪಕ್ಷಗಳಿಗೆ ಬೇರೆ ಬೇರೆ ಒತ್ತಾಯಗಳಿವೆ. ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ ಅಖಿಲ ಭಾರತ ಒಕ್ಕೂಟದ ಭಾಗವಾಗಿದೆ ಎಂದು ನನಗೆ ವಿಶ್ವಾಸವಿದೆ. ಮುಂದೆಯೂ ಹಾಗೆಯೇ ಉಳಿಯುತ್ತದೆ ಎಂದು ಹೇಳಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next