Advertisement

ರೈತ ಮುಖಂಡರಿಂದ ಉಪವಾಸ ಸತ್ಯಾಗ್ರಹ 

06:00 AM Dec 12, 2018 | |

ಬೆಳಗಾವಿ: ಕಬ್ಬಿನ ಬಿಲ್‌ ಬಾಕಿ ಹಾಗೂ ಎಫ್‌ಆರ್‌ಪಿ ದರಕ್ಕಾಗಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ 4ನೇ ದಿನಕ್ಕೆ ಕಾಲಿಟ್ಟಿದ್ದು, ಮಂಗಳವಾರ ರೈತರು ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದರು. ರೈತ ಸಂಘ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ಕಬ್ಬಿನ ಸಮಸ್ಯೆ ಇತ್ಯರ್ಥಕ್ಕೆ ಕೂಡಲೇ ರಾಜ್ಯ ಸರಕಾರ ಸ್ಪಂದಿಸಬೇಕು. ಹಲವಾರು ತಿಂಗಳಿಂದ ಹೋರಾಟ ನಡೆಯುತ್ತಿದ್ದರೂ ಸರಕಾರ ಸ್ಪಂದಿಸುತ್ತಿಲ್ಲ. ರೈತರನ್ನು ಸಂಪೂರ್ಣ
ನಿರ್ಲಕ್ಷಿಸಿ ಅಧಿವೇಶನ ನಡೆಸಿದ್ದು ಏಕೆ ಎಂದು ಪ್ರಶ್ನಿಸಿದರು. 

Advertisement

ಅನಾರೋಗ್ಯದಿಂದ ಬಳಲುತ್ತಿದ್ದರೂ ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ
ಕುರಬೂರು ಶಾಂತಕುಮಾರ ಅವರು, ವಾಪಸ್‌ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಉಪವಾಸ ಸತ್ಯಾಗ್ರಹ ನಿರತ ರೈತ ಮುಖಂಡ ಸಿದ್ದಗೌಡ ಮೋದಗಿ ಮಾತನಾಡಿ, ಅಹಿಂಸಾ ಮಾರ್ಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ ಸರಕಾರ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ನಮ್ಮ ಬೇಡಿಕೆ ಈಡೇರದಿದ್ದರೆ ಡಿ.13ರಂದು ಬೆಳಗಾವಿಯಿಂದ ಸುವರ್ಣ ವಿಧಾನಸೌಧದವರೆಗೂ ಪಾದಯಾತ್ರೆ ಮೂಲಕ ಹೋರಾಟ ನಡೆಸಲಾಗುವುದು. ಹೋರಾಟವನ್ನು ಬೆಳಗಾವಿ ಬಾರ್‌ ಅಸೋಸಿಯೇಷನ್‌ ಹಾಗೂ ವಕೀಲರು ಬೆಂಬಲಿಸಿದ್ದಾರೆ. ಮುಂದಿನ ಅನಾಹುತಕ್ಕೆ ಸರಕಾರವೇ ಹೊಣೆ  ಎಂದು ಎಚ್ಚರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next