Advertisement

ಮೂಲ ಸೌಲಭ್ಯ ಒದಗಿಸಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ

09:09 AM Feb 23, 2022 | Team Udayavani |

ಚಿತ್ತಾಪುರ: ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಡಾ| ಬಿ.ಆರ್‌ ಅಂಬೇಡ್ಕರ್‌ ಸರ್ಕಾರಿ ಮೆಟ್ರಿಕ್‌ ನಂತರ ಬಾಲಕರ ವಸತಿ ನಿಲಯದ ಹಾಸ್ಟೆಲ್‌ಗೆ ಮೂಲ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ಗೇಟ್‌ಗೆ ಬೀಗ ಹಾಕಿ ಪ್ರತಿಭಟನೆ ನಡೆಸಿ ಉಪವಾಸ ಸತ್ಯಾಗ್ರಹ ನಡೆಸಿದರು.

Advertisement

ವಸತಿ ನಿಲಯದಲ್ಲಿ ಸರಿಯಾದ ಸಮಯಕ್ಕೆ ಊಟದ ವ್ಯವಸ್ಥೆ ಇಲ್ಲ. ಕೋಣೆಗಳಲ್ಲಿ ವಿದ್ಯುತ್‌ ವ್ಯವಸ್ಥೆ ಇಲ್ಲ. ಕುಡಿಯುವ ನೀರಿನ ತೋಂದರೆ ಇದೆ. ಸಿಸಿ ಕ್ಯಾಮೆರಾಗಳಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲಕರವಾಗುವ ಪುಸ್ತಕಗಳನ್ನು ತರಿಸಿ ಎಂದು ಮನವಿ ಮಾಡದರೂ ಯಾವುದೇ ಪ್ರಯೋಜನವಾಗಿಲ್ಲ. ನೀರಿನ ಟ್ಯಾಂಕ್‌ ತೋಳೆದು ಒಂದು ವರ್ಷವೇ ಆಗಿದೆ ಅದೇ ನೀರಿನಲ್ಲಿ ಸ್ನಾನ ಮಾಡುತ್ತಿದ್ದೇವೆ. ಸಮಸ್ಯೆಗಳನ್ನು ಬಗೆಹರಿಸಿ ಎಂದು ಮೇಲಧಿಕಾರಿ ಬಳಿ ಹೋದರೆ ನಿಮ್ಮನ್ನು ವಸತಿ ನಿಲಯದಿಂದ ತೆಗೆದು ಹಾಕುತ್ತೇವೆ ಎಂದು ವಾರ್ಡನ್ ಭೀಮಾಶಂಕರ್‌ ದಂಡೆ ಬೆದರಿಕೆ ಹಾಕುತ್ತಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

ಕೂಡಲೇ ವಸತಿ ನಿಲಯದ ವಾರ್ಡನ್‌ ಹಾಗೂ ಅಡುಗೆ ಮಾಡುವ ಸಿಬ್ಬಂದಿಯನ್ನು ಬದಲಿಸಬೇಕು. ವಸತಿ ನಿಲಯದಲ್ಲಿ ಬೇಕಾಗುವ ಪ್ರತಿಯೊಂದು ಮೂಲ ಸೌಲಭ್ಯ ಕಲ್ಪಿಸಬೇಕು. ಒಂದು ವೇಳೆ ವಿಳಂಬ ನೀತಿ ಅನುಸರಿಸಿದರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ ಸ್ಥಳಕ್ಕೆ ಭೇಟಿ ನೀಡಿ ನಿಲಯದ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದಾಗ ವಿದ್ಯಾರ್ಥಿಗಳು ಪ್ರತಿಭಟನೆ ಕೈ ಬಿಟ್ಟರು. ಪ್ರತಿಭಟನೆಯಲ್ಲಿ ಅಯ್ಯಪ್ಪ, ದೇವಸುಂದರ, ರೋಹನ್‌, ಭೀಮರಾಯ, ಮಹಾದೇವ, ಚೇತನ್‌, ಮಲ್ಲಿಕಾರ್ಜುನ, ಶರಣಕುಮಾರ, ನರಸಯ್ನಾ, ಸಚಿನ್‌, ಯೋಗೇಶ, ಅಶೋಕ, ಸೇರಿದಂತೆ ಅನೇಕ ವಿದ್ಯಾರ್ಥಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next