Advertisement

ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸಾವು

07:05 AM Jan 02, 2018 | |

ಕುಣಿಗಲ್‌: ತಾಲೂಕಿನ ರಾಜ್ಯ ಹೆದ್ದಾರಿ 33ರ ಗವಿಮಠ ಬಳಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಕುಣಿಗಲ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಹೊಸ ವರ್ಷದ ಪ್ರಯುಕ್ತ ಸೋಮವಾರ ಬೆಳಗಿನ ಜಾವ ಗೊರವನಹಳ್ಳಿಯ ಮಹಾ ಲಕ್ಷಿ$¾à ದರ್ಶನಕ್ಕೆ ತೆರಳುತ್ತಿದ್ದಾಗ ಗವಿಮಠ ಗ್ರಾಮದ ಬಳಿ ರಸ್ತೆ ದಾಟುತ್ತಿದ್ದ ಮಗು ಕಾರಿಗೆ ಅಡ್ಡ ಬಂದಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಎಡರಸ್ತೆ ಬದಿಯಲ್ಲಿದ್ದ ಕ್ಯಾಂಟರ್‌ಗೆ ಡಿಕ್ಕಿಹೊಡೆಯಿತು. ಪರಿಣಾಮ ಸಿಧ್ದೋಜಿರಾವ್‌(60), ಉಷಾಬಾಯಿ (35), ಕೀರ್ತನಾ (7), ಹಿತೇಶ್‌(3), ಭುವನಾ (16) ಸ್ಥಳದಲ್ಲೇ ಮೃತಪಟ್ಟರು. ಗಾಯಗೊಂಡ ನಾಲ್ವರಿಗೆ ಕುಣಿಗಲ್‌ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬೆಂಗಳೂರಿನ ಸ್ಪರ್ಷ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಮೂಲತಃ ತಾಲೂಕಿನ ಚೌಡನಕುಪ್ಪೆ ಗ್ರಾಮದವರು ಎಂದು ತಿಳಿದು ಬಂದಿದೆ. ಕಾರಿಗೆ ಅಡ್ಡಬಂದ ಮಗುವಿಗೂ ಸಣ್ಣಪುಟ್ಟಗಾಯಗಳಾಗಿವೆ. ಕುಣಿಗಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Advertisement

Udayavani is now on Telegram. Click here to join our channel and stay updated with the latest news.

Next