Advertisement
ಇವರಿಗೆ ಜೀವ ಬೆದರಿಕೆ, ಆತ್ಮಹತ್ಯೆಗೆ ದುಷೆøàರಣೆ ನೀಡಿದ ಆರೋಪದಲ್ಲಿ ಪಿಲಾರು ಪೆರ್ನಾಲಿನ ನಿವಾಸಿ, ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿ’ ಸೋಜಾ (49) ಎಂಬಾತನನ್ನು ಪ್ರಕರಣದ ತನಿಖಾಧಿಕಾರಿಯಾಗಿರುವ ಕಾಪು ಸಿಐ ಮಹೇಶ್ ಪ್ರಸಾದ್ ಅವರ ನಿರ್ದೇಶನದಂತೆ ಶಿರ್ವ ಠಾಣಾಧಿಕಾರಿ ಶ್ರೀಶೈಲಂ ಅವರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾ. 11ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಫಾದರ್ ಮಹೇಶ್ ಡಿ’ ಸೋಜಾ ಅವರ ಮೊಬೈಲ್ನಿಂದ ಡೇವಿಡ್ನ ಪತ್ನಿ ಪ್ರಿಯಾ ಡಿ’ ಸೋಜಾರಿಗೆ ಮೆಸೇಜ್ ಹೋಗಿತ್ತು. ಇದನ್ನು ಆಕ್ಷೇಪಿಸಿ ಡೇವಿಡ್ ಮೊಬೈಲ್ ಮೂಲಕವೇ ಮಹೇಶ್ ಡಿ’ಸೋಜಾರಿಗೆ ಹಾಗೂ ಅವರ ತಾಯಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದ. ಅಲ್ಲದೆ ಅರ್ಧ ಗಂಟೆಯ ಒಳಗೆ ಚರ್ಚ್ಗೆ ನುಗ್ಗಿ ನಿನ್ನನ್ನು ಕತ್ತರಿಸಿ ಹಾಕುತ್ತೇನೆ, ಜನ ಸೇರಿಸಿ ಮರ್ಯಾದೆ ತೆಗೆಯುತ್ತೇನೆ ಎಂದೆಲ್ಲ ಬೆದರಿಕೆ ಒಡ್ಡಿದ್ದ. ಜತೆಗೆ ಇವತ್ತೇ ನೇಣು ಬಿಗಿದುಕೊಳ್ಳಬೇಕು ಎಂದು ಆತ್ಮಹತ್ಯೆ ಮಾಡಿಕೊಳ್ಳಲು ದುಷೆøàರಣೆ ನೀಡಿದ್ದಾನೆ. ಇದೇ ಕಾರಣದಿಂದ ಮಹೇಶ್ ಡಿ’ ಸೋಜಾ ಅವರು ಶಾಲೆಯ ಪ್ರಾಂಶುಪಾಲರ ಕೊಠಡಿಯ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೆ ಆರೋಪಿಯು ಘಟನೆ ಬಳಿಕ ಈ ಪ್ರಕರಣಕ್ಕೆ ಸಂಬಂಧಪಟ್ಟು ತನ್ನ ಪತ್ನಿಯ ಮೊಬೈಲ್ನಲ್ಲಿದ್ದ ಸಂದೇಶಗಳನ್ನು ಅಳಿಸಿ ಸಾಕ್ಷ್ಯ ನಾಶ ಮಾಡಿದ್ದಾನೆ ಎಂಬುದು ತನಿಖೆಯಿಂದ ತಿಳಿದು ಬಂದಿರುವುದಾಗಿ ತನಿಖಾಧಿಕಾರಿ ತಿಳಿಸಿದ್ದಾರೆ.
Related Articles
Advertisement
ಆರೋಪಿ ಹಲವರ ಮೇಲೆ ಕೇಸು ದಾಖಲಿಸಿದ್ದಇದೇ ಪ್ರಕರಣದಲ್ಲಿ ಆರೋಪಿಯೂ ಕೆಲವರ ವಿರುದ್ಧ ಕೇಸು ದಾಖಲಿಸಿದ್ದಾನೆ. ಫಾದರ್ ಆತ್ಮಹತ್ಯೆ ಪ್ರಕರಣದಲ್ಲಿ ತನ್ನ ಪಾತ್ರವಿಲ್ಲದಿದ್ದರೂ, ಕೆಲವರು ತನ್ನ ವಿರುದ್ಧ ಮಾನಹಾನಿ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ್ದರು ಎಂದು ಆರೋಪಿಸಿ ಕೋರ್ಟ್ ಮೆಟ್ಟಿಲೇರಿದ್ದ. ಈ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.