Advertisement

ಹುಮನಾಬಾದ್: ಆಸ್ತಿ ವಿವಾದ; ತಂದೆಯನ್ನೇ ಕಟ್ಟಿಗೆಯಿಂದ ಹೊಡೆದು ಕೊಲೆಗೈದ ಮಗ

01:14 PM May 30, 2022 | Team Udayavani |

ಹುಮನಾಬಾದ್: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಮಗನೇ ತಂದೆಯನ್ನು ಕೊಲೆ ಮಾಡಿದ ಘಟನೆ ತಾಲೂಕಿನ ಘಾಟಬೋರಳ ಗ್ರಾಮದಲ್ಲಿ ಸಂಭವಿಸಿದೆ.

Advertisement

ತಾಲೂಕಿನ ಘಾಟಬೋರಳ ಗ್ರಾಮದ  ದಿಗಂಬರ ತುಕಾರಾಮ ಇರದೆ (65) ಕೊಲೆಗೀಡಾದ ವ್ಯಕ್ತಿ.

ಮೃತವ್ಯಕ್ತಿಯ ಮಗ ದಿನೇಶ ಇರದೆ ತಂದೆಯನ್ನು ಕಟ್ಟಿಗೆಯಿಂದ ಬಲವಾಗಿ ಹೊಡೆದು  ಕೊಲೆ ಮಾಡಿದ ಆರೋಪಿ ಎನ್ನಲಾಗಿದೆ.

ಇದನ್ನೂ ಓದಿ: ಮೋಟರ್‌ ಕದ್ದನೆಂದು ಕಾರ್ಮಿಕನ ಕೊಲೆ ಮಾಡಿ ಪಾದಚಾರಿ ಮಾರ್ಗದಲ್ಲಿ ಶವ ಎಸೆದರು!

ಭಾನುವಾರ ಸಂಜೆ  ಕಟ್ಟಿಗೆಯಿಂದ ತಂದೆಯ ತಲೆಗೆ ಹೊಡೆದಿದ್ದು ಭಾರೀ ರಕ್ತಸ್ರಾವ ಆಗುತ್ತಿರುವ ಹಿನ್ನೆಲೆಯಲ್ಲಿ ಬೀದರ್ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗಿನ ಜಾವ ದಿಗಂಬರ ಮೃತಪಟ್ಟಿದ್ದಾರೆ.

Advertisement

ಘಟನೆಯ ಕುರಿತು ಪೊಲೀಸ್ ಅಧಿಕಾರಿಗಳು ದೂರು ಪಡೆದುಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next