Advertisement

Mangaluru ಪೊಲೀಸರ ಎದುರೇ ಮಗುವನ್ನು ಕೊಲ್ಲಲು ತಂದೆಯಿಂದ ಯತ್ನ

12:10 AM Sep 27, 2023 | Team Udayavani |

ಮಂಗಳೂರು: ಮದ್ಯ ಸೇವಿಸಿದ ವ್ಯಕ್ತಿಯೋರ್ವ ಪೊಲೀಸರ ಎದುರಲ್ಲಿಯೇ ತನ್ನ ಮಗುವನ್ನು ಎತ್ತಿ ನೆಲಕ್ಕೆ ಎಸೆದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ.

Advertisement

ಮಹೇಶ್‌ ಆರೋಪಿ. ಈತ ಹಲವು ಸಮಯದಿಂದ ಪತ್ನಿ ಮತ್ತು ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ. ಮಾತ್ರವಲ್ಲದೇ ಪತ್ನಿ ಮತ್ತು ಮಕ್ಕಳನ್ನು ಬೆಂಕಿ ಹಚ್ಚಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಪತ್ನಿ ಪಕ್ಕದಲ್ಲಿರುವ ಕದ್ರಿ ಠಾಣೆಗೆ ಬಂದು ದೂರು ನೀಡಿದ್ದರು.

ಪೊಲೀಸರು ಆಕೆಯ ಮನೆಗೆ ಹೊರಡುತ್ತಿದ್ದಂತೆ ಆರೋಪಿ ಮಹೇಶ್‌ ತನ್ನ 6 ವರ್ಷದ ಗಂಡು ಮತ್ತು ಒಂದೂವರೆ ವರ್ಷದ ಹೆಣ್ಣುಮಗುವನ್ನು ಕರೆದುಕೊಂಡು ಠಾಣೆಗೆ ಬಂದಿದ್ದ. ಪೊಲೀಸರು ವಿಚಾರಿಸುತ್ತಿದ್ದಾಗ ಮಗುವನ್ನು ನೀಡದೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುತ್ತ ಮಗುವನ್ನು ಎಸೆದಿದ್ದಾನೆ.

 

Advertisement

Udayavani is now on Telegram. Click here to join our channel and stay updated with the latest news.

Next