Advertisement

ಫಾಝಿಲ್ ಹತ್ಯೆ ಪ್ರಕರಣ: ಮತ್ತೆ 16 ಮಂದಿ ಶಂಕಿತರು ಪೊಲೀಸ್ ವಶಕ್ಕೆ

06:56 PM Jul 30, 2022 | Team Udayavani |

ಮಂಗಳೂರು : ಸುರತ್ಕಲ್‌ನ ಮಂಗಳ ಪೇಟೆಯ ಮುಹಮ್ಮದ್‌ ಫಾಝಿಲ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆಳವಾದ ತನಿಖೆ ನಡೆಸುತ್ತಿದ್ದು, ಶನಿವಾರ ಮತ್ತೆ 16 ಮಂದಿ ಶಂಕಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Advertisement

ಆರೋಪಿಗಳ ಬಗ್ಗೆ ಸುಳಿವು ಲಭ್ಯವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿಕೆ ನೀಡಿದ್ದು, ಸಾಕ್ಷ್ಯಾಧಾರ ಇದ್ದರೆ ಮಾತ್ರ ಬಂಧಿಸಲಾಗುವುದು. ಮೊದಲ ಹಂತದಲ್ಲಿ 21 ಮಂದಿಯನ್ನು ವಿಚಾರಣೆ ನಡೆಸಲಾಗಿತ್ತು ಎಂದು ತಿಳಿಸಿದರು.

ಎಡಿಜಿಪಿ ಆಲೋಕ್‌ ಕುಮಾರ್‌ ಸ್ವತಃ ತನಿಖೆಯ ಉಸ್ತುವಾರಿ ವಹಿಸಿದ್ದು, ಶೀಘ್ರವಾಗಿ ಅಪರಾಧಿಗಳನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪೊಲೀಸರು ಮೊದಲ ಹಂತದಲ್ಲಿ ಸುರತ್ಕಲ್‌, ಬಜಪೆ, ಪಣಂಬೂರು, ಮೂಲ್ಕಿ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 21 ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next