Advertisement

ಜನಾರ್ಧನ ಪೂಜಾರಿ ವಿರುದ್ಧ ಅವಹೇಳನಕಾರಿ ಪೋಸ್ಟ್: ದೂರು

05:11 PM Jun 27, 2021 | Team Udayavani |

ಮಂಗಳೂರು: ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಜನಾರ್ಧನ ಪೂಜಾರಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳಕಾರಿಯಾಗಿ ಪೋಸ್ಟ್ ಮಾಡಿದ್ದ ಬಗ್ಗೆ ರಶೀದ್ ಟಿಪ್ಪು ಎಂಬಾತನ ವಿರುದ್ಧ ದೂರು ನೀಡಲಾಗಿದೆ.

Advertisement

ಪೋಸ್ಟ್ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಬಿರುವೆರ್ ಕುಡ್ಲ ಸಂಘಟನೆ ದೂರು ನೀಡಿದೆ.

ಇದನ್ನೂ ಓದಿ:ಕೇಂದ್ರ ಹಾಗೂ ರಾಜ್ಯಗಳು ಎಂಎಸ್ಎಂಇ ಗೆ ನೀಡಿರುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ: ಶೆಟ್ಟರ್

ಫೇಸ್ ಬುಕ್ ನಲ್ಲಿ ಕರಾವಳಿ ರಶೀದ್ ಟಿಪ್ಪು ಎಂಬ ಖಾತೆಯಿಂದ ಜನಾರ್ಧನ ಪೂಜಾರಿಯವರ ವಿರುದ್ದ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ. ಕೂಡಲೇ ಈತನ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸುತ್ತೇವೆ ಎಂದು ಬಿರುವೆರ್ ಕುಡ್ಲ ಸಂಘಟನೆ ದೂರಿನಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next