Advertisement

ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ : ಬೀಳಗಿಯ ಓರ್ವ ವಶಕ್ಕೆ

09:25 PM Jan 24, 2021 | Team Udayavani |

ಬಾಗಲಕೋಟೆ : ಕರ್ನಾಟಕ ಲೋಕಸೇವಾ ಆಯೋಗದಿಂದ ರವಿವಾರ ನಡೆಯಬೇಕಿದ್ದ ಎಫ್‌ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಬೀಳಗಿ ತಾಲೂಕಿನ ಬೂದಿಹಾಳದ ಓರ್ವ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಕೆಪಿಎಸ್‌ಸಿಯಲ್ಲಿ ಎಸ್‌ಡಿಎ ನೌಕರನಾಗಿರುವ ಬೀಳಗಿ ತಾಲೂಕು ಬೂದಿಹಾಳದ ರಮೇಶ ಹೆರಕಲ್ ಎಂಬಾತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪತ್ರಿಕೆ ಪತ್ರಿಕೆ ಸೋರಿಕೆಯಾದ ವಿಷಯ ಬಹಿರಂಗವಾಗುತ್ತಿದ್ದಂತೆ ತಮ್ಮ ಊರು ಬೂದಿಹಾಳದಿಂದ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಗ್ರಾಮಕ್ಕೆ ತೆರಳಿದ್ದ ಎನ್ನಲಾಗಿದೆ. ಸಿಸಿಬಿ ಪೊಲೀಸರು, ಚಿಕ್ಕಪಡಸಲಗಿಯಲ್ಲಿ ರಮೇಶ ಹೆರಕಲ್ ಎಂಬಾತನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ.

 

ಇದನ್ನೂ ಓದಿ : ಮಕ್ಕಳು ಸಂಗ್ರಹಿಸಿದ್ದ ಹುಂಡಿಯನ್ನು ಶ್ರೀರಾಮ ಮಂದಿರ ನಿಧಿಗೆ ಸಮರ್ಪಣೆ

Advertisement
Advertisement

Udayavani is now on Telegram. Click here to join our channel and stay updated with the latest news.

Next