Advertisement

ಸೇತುವೆ ನಿರ್ಮಾಣಕ್ಕೆ 38 ಲಕ್ಷ ರೂ.ಅಂದಾಜುಪಟ್ಟಿ ಸಿದ್ಧ

09:07 PM Aug 21, 2019 | mahesh |

ತೆಕ್ಕಟ್ಟೆ: ಬೇಳೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹಿರೆ ಹೊಳೆಗೆ ಅಡ್ಡಲಾಗಿರುವ ಕೋಣಬಗೆ -ಅಚ್ಲಾಡಿ ಸಂಪರ್ಕ ಸೇತುವೆ ಅಪಾಯದಲ್ಲಿದ್ದು ಮುರಿದು ಬೀಳುವಂತಿದೆ. ಈ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಉದಯವಾಣಿ ಜನಪರ ಕಾಳಜಿ ವಹಿಸಿ ಕುಸಿಯುವ ಭೀತಿಯಲ್ಲಿರುವ ಹಳೆಯ ಸೇತುವೆ ಎನ್ನುವ ಶೀರ್ಷಿಕೆಯಡಿಯಲ್ಲಿ ಆ. 12ರಂದು ಚಿತ್ರ ಸಹಿತ ವಿಸ್ತೃತ ವರದಿ ಪ್ರಕಟಿಸಿದ ಬೆನ್ನಲ್ಲಿಯೇ ಎಚ್ಚೆತ್ತುಕೊಂಡ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ಕಚೇರಿ ಕುಂದಾಪುರ ಇವರು ಆ.13ರಂದು ಹೊಸದಾಗಿ ಸೇತುವೆ ನಿರ್ಮಿಸಲು ಶಾಲಾ ಸಂಪರ್ಕ ಸೇತು ಯೋಜನೆ ಅಡಿಯಲ್ಲಿ ರೂ.38.00 ಲಕ್ಷದ ಅಂದಾಜುಪಟ್ಟಿ ತಯಾರಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ.

Advertisement

ಉದಯವಾಣಿ ವರದಿಯ ಆಧಾರದ ಮೇಲೆ ಸಾರ್ವಜನಿಕರ ಹಿತದೃಷ್ಟಿಯನ್ನು ಆಧಾರವಾಗಿರಿಸಿಕೊಂಡಿರುವ ಬೇಳೂರು ಗ್ರಾಮ ಪಂಚಾಯತ್‌ ಮಹತ್ವದ ನಿರ್ಣಯ ಕೈಗೊಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.ಉದಯವಾಣಿಯಲ್ಲಿ ಪ್ರಕಟಗೊಂಡ ವರದಿಗೆ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next