Advertisement

ಕಾಂಗ್ರೆಸ್‌ಗೆ ಆಪರೇಷನ್‌ ಕಮಲ ಭೀತಿ;ಎಚ್ಚೆತ್ತುಕೊಂಡ ಹೈಕಮಾಂಡ್‌

03:24 PM Dec 04, 2018 | |

ಬೆಂಗಳೂರು: ಆಪರೇಷನ್‌ ಕಮಲ ನಡೆಸುವ ಕುರಿತಾಗಿ ಆಡಿಯೋವೊಂದು ಬಹಿರಂಗವಾದ ಬೆನ್ನಲ್ಲೇ ಕಾಂಗ್ರೆಸ್‌ ಹೈಕಮಾಂಡ್‌ ಎಚ್ಚೆತ್ತುಕೊಂಡಿದ್ದು,ರಾಜ್ಯ ಕಾಂಗ್ರೆಸ್‌ ನಾಯಕರಿಗೆ  ಶಾಸಕರ ಬಗ್ಗೆ ಎಚ್ಚರಿಕೆಯಿಂದಿರಲು ಸೂಚನೆ ನೀಡಿರುವುದಾಗಿ ವರದಿಯಾಗಿದೆ. 

Advertisement

ಯಾವುದೇ ಕಾರಣಕ್ಕೂ ಮೈತ್ರಿ ಸರ್ಕಾರಕ್ಕೆ ಧಕ್ಕೆಯಾಗದಂತೆ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಹೈಕಮಾಂಡ್‌ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ. 

ನಾಳೆ ಬುಧವಾರ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ  ಕೆ.ಸಿ.ವೇಣುಗೋಪಾಲ್‌ ನೇತೃತ್ವದಲ್ಲಿ ಹಿರಿಯ ಕಾಂಗ್ರೆಸ್‌ ನಾಯಕರ ಸಭೆ ನಡೆಸಲಾಗುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ. ಸಂಪುಟ ವಿಸ್ತರಣೆ ಕುರಿತಾಗಿಯೂ ಮಹತ್ವದ ನಿರ್ಣಯ ಸಭೆಯಲ್ಲಿ ಕೈಗೊಳ್ಳುವ ಸಾಧ್ಯತೆಗಳಿವೆ. 

ದೂರಿಗೆ ಚಿಂತನೆ 
ಶಾಸಕ ಶ್ರೀರಾಮುಲು ಆಪ್ತ ಸಹಾಯಕ ದುಬೈ ಮೂಲದ ಉದ್ಯಮಿ ಜತೆ ನ.27 ರಂದು ಮೊಬೈಲ್‌ ಮೂಲಕ ಮಾತುಕತೆ ನಡೆಸಿದ್ದಾರೆ ಎನ್ನಲಾದ ಆಡಿಯೋ ವಿರುದ್ದ ದೂರು ನೀಡಲು ಕೆಪಿಸಿಸಿ ನಿರ್ಧರಿಸಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ಇಂದೇ ದೂರು ದಾಖಲಿಸುವುದಾಗಿ ದಿನೇಶ್‌ ಗುಂಡು ರಾವ್‌ ಹೇಳಿದ್ದಾರೆ. 

Advertisement

ವಿಧಾನಪರಿಷತ್‌ ಸದಸ್ಯ ರಿಜ್ವಾನ್‌ ಅರ್ಷದ್‌ ಅವರಿಗೆ ದಾಖಲೆಗಳನ್ನು ಸಂಗ್ರಹಿಸಲು ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

ಆಡಿಯೋದ ಸಿಡಿ ಸಮೇತ ಸೈಬರ್‌ ಕ್ರೈಂಗೆ ದೂರು ನೀಡಲು ಸಿದ್ದತೆ ನಡೆಸಲಾಗಿದೆ ಎಂದು ವರದಿಯಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next