Advertisement

ಗ್ಯಾರಂಟಿಗಳಿಗೆ ಜನರ ಪ್ರತಿಕ್ರಿಯೆ ನೋಡಿ ಭಯದಿಂದ BJPಯವರ ಆರೋಪ: S.S. ಮಲ್ಲಿಕಾರ್ಜುನ್

09:37 PM Aug 11, 2023 | Team Udayavani |

ದಾವಣಗೆರೆ: ಕಾಂಗ್ರೆಸ್ ಸರ್ಕಾರ ಕೊಡುತ್ತಿರುವ ಐದು ಗ್ಯಾರಂಟಿ ಯೋಜನೆಗಳಿಗೆ ಜನರ ಪ್ರತಿಕ್ರಿಯೆ ನೋಡಿ ಭಯದಿಂದ ಬಿಜೆಪಿಯವರು ಏನೇನೋ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಇಲಾಖೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ದೂರಿದ್ದಾರೆ.

Advertisement

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಐದು ಗ್ಯಾರಂಟಿ ನೀಡುವ ಭರವಸೆ ಯಂತೆ ಅನ್ನಭಾಗ್ಯ, ಗೃಹಜ್ಯೋತಿ ಯೋಜನೆ ಜಾರಿ ಮಾಡಲಾಗಿದೆ. ಮನೆ ಯಜಮಾನಿಗೆ ೨ ಸಾವಿರ ರೂಪಾಯಿ ಕೊಡುವ ಗೃಹಲಕ್ಷ್ಮಿ ಯೋಜನೆಗೆ ಆ. ೨೭ ರಂದು ಚಾಲನೆ ನೀಡಲಾಗುವುದು. ಮುಂದಿನ ದಿನಗಳಲ್ಲಿ ಯುವ ನಿಽ ಪ್ರಾರಂಭಿಸಲಾಗುವುದು. ಇದರಿಂದ ಭಯಗೊಂಡಿರುವ ಬಿಜೆಪಿಯವರು ಏನೇನೋ ಆರೋಪ ಮಾಡುತ್ತಿ ದ್ದಾರೆ ಎಂದು ತಿಳಿಸಿದರು.

ಕೃಷಿ ಸಚಿವ ಚಲುವರಾಯಸ್ವಾಮಿ ಯಾವ ಕಮಿಷನ್ ತೆಗೆದುಕೊಂಡಿಲ್ಲ. ಆದರೂ ಅವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಲಾಗುತ್ತಿದೆ. ಗುತ್ತಿಗೆದಾರರಿಂದ ನಮ್ಮ ಕಾಂಗ್ರೆಸ್‌ನವರು ಯಾರೂ ಕಮಿಷನ್ ತೆಗೆದು ಕೊಂಡಿಲ್ಲ. ನಮ್ಮಲ್ಲಿ ಕಮಿಷನ್ ಪಡೆಯುವಂತವಹರು ಯಾರೂ ಇಲ್ಲ. ಎಲ್ಲರೂ ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಬರೀ ಮೂರು ತಿಂಗಳಲ್ಲಿ ಒಳ್ಳೆಯ ಹೆಸರು ಬರುತ್ತಿದೆ ಎಂದು ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

ನಮ್ಮ ತಂದೆಯವರು(ಶಾಮನೂರು ಶಿವಶಂಕರಪ್ಪ) ಲೋಕಸಭಾ ಚುನಾವಣಾ ಟಿಕೆಟ್ ಕೇಳುತ್ತೇನೆ. ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿರುವುದು ಅವರ ವೈಯಕ್ತಿಕ. ನಾನೂ ಸಹ ಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ. ಈಚೆಗೆ ನಡೆದ ಸಭೆಯಲ್ಲಿ ನನಗೂ ಲೋಕಸಭಾ ಚುನಾವಣೆಯಲ್ಲಿ ಸ್ಪಽಸುವ ಬಗ್ಗೆ ಕೇಳಲಾಯಿತು. ಪಕ್ಷದ ಕಾರ್ಯಕರ್ತರು ಹೇಗೆ ಹೇಳುತ್ತಾರೋ ಹಾಗೆ ಕೇಳುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next