Advertisement

Feb. 2: ಧರ್ಮಸ್ಥಳದಲ್ಲಿ ಭಗವಾನ್‌ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

11:33 PM Jan 26, 2024 | Team Udayavani |

ಬೆಳ್ತಂಗಡಿ: ಧರ್ಮಸ್ಥಳದ ರತ್ನಗಿರಿಯಲ್ಲಿ ವಿರಾಜಮಾನವಾಗಿರುವ ಭಗವಾನ್‌ ಶ್ರೀ ಬಾಹುಬಲಿ ಮೂರ್ತಿಗೆ ಫೆ. 2ರಂದು ಶುಕ್ರವಾರ ಬೆಳಗ್ಗೆ 8.30ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ.

Advertisement

ಕಾರ್ಕಳ ಜೈನಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು. ಇದಕ್ಕೆ ಪೂರ್ವಭಾವಿಯಾಗಿ ಫೆ. 1ರಂದು ಗುರುವಾರ ರತ್ನಗಿರಿಯಲ್ಲಿ ಬೆಳಗ್ಗೆ 9ರಿಂದ ತೋರಣ ಮೂಹೂರ್ತ, ವಿಮಾನಶುದ್ಧಿ , ಶೋಡಷ ಕಲಶಾಭಿಷೇಕ, ಸಂಜೆ 4ರಿಂದ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯಲಿವೆ.

Advertisement

Udayavani is now on Telegram. Click here to join our channel and stay updated with the latest news.

Next