Advertisement

Mangalore: ಫೆ. 9, 10: ಸಚಿವ ದಿನೇಶ್‌ ಗುಂಡೂರಾವ್‌ ಪ್ರವಾಸ

12:13 AM Feb 08, 2024 | Team Udayavani |

ಮಂಗಳೂರು/ಉಡುಪಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಫೆ. 9 ಮತ್ತು 10ರಂದು ದ.ಕ. ಹಾಗೂ ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

Advertisement

ಫೆ. 9ರಂದು ಬೆಳಗ್ಗೆ 8.15ಕ್ಕೆ ವಿಮಾನ ನಿಲ್ದಾಣಕ್ಕೆ, 8.45ಕ್ಕೆ ಸಕೀìಟ್‌ ಹೌಸ್‌ಗೆ, 10ಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್‌ ಪಕ್ಷದ ಮುಂಚೂಣಿ ಘಟಕಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ರಾತ್ರಿ 8 ಗಂಟೆಗೆ ಉಡುಪಿಗೆ ತೆರಳುವರು. ಫೆ. 10ರ ಬೆಳಗ್ಗೆ 10 ಗಂಟೆಗೆ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೈಸೂರಿನ ಅಖೀಲ ಭಾರತ ವಾಕ್‌ ಶ್ರವಣ ಸಂಸ್ಥೆಯ ಔಟ್‌ರೀಚ್‌ ಸರ್ವಿಸ್‌ ಸೆಂಟರ್‌ ಉದ್ಘಾಟನೆ ಹಾಗೂ ನೂತನ ಡಯಾಲಿಸಿಸ್‌ ಘಟಕ ಉದ್ಘಾಟನೆ, 11ಕ್ಕೆ ಕೋಟೇಶ್ವರ ಸಹನ ಕನ್ವೆನ್ಶನ್‌ ಸೆಂಟರ್‌ನಲ್ಲಿ ಕಾಂಗ್ರೆಸ್‌ ಪದಾಧಿಕಾರಿಗಳ ಸಭೆ, ಮಧ್ಯಾಹ್ನ 2ಕ್ಕೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ನೂತನ ಡಯಾಲಿಸಿಸ್‌ ಘಟಕ ಉದ್ಘಾಟನೆ, ಮಧ್ಯಾಹ್ನ 2.30ಕ್ಕೆ ನಗರದ ಸರಕಾರಿ ಆಸ್ಪತ್ರೆಗಳಿಗೆ ಭೇಟಿ, ಪರಿಶೀಲನೆ, ಮಧ್ಯಾಹ್ನ 3ಕ್ಕೆ ಜಿ.ಪಂ. ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ. ಅನಂತರ ಮಂಗಳೂರಿಗೆ ಪ್ರಯಾಣ ಬೆಳೆಸಿ ಸಂಜೆ 5.30ಕ್ಕೆ ನಗರದ ತಣ್ಣೀರುಬಾವಿಗೆ ಆಗಮಿಸಿ ಗಾಳಿಪಟ ಹಬ್ಬದಲ್ಲಿ ಭಾಗವಹಿಸುವರು. ರಾತ್ರಿ 8.10ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು ಎಂದು ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next