Advertisement

ಜಾಗತಿಕ ಬಂಟರ ಸಂಘಗಳ ಒಕ್ಕೂಟ: ನೆರವು ವಿತರಣೆ

01:05 PM Jul 22, 2018 | Team Udayavani |

ಮುಂಬಯಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಬಂಟ ಸಮಾಜದ ಬಡ ಕುಟುಂಬದ ಅನಾರೋಗ್ಯದಲ್ಲಿರುವವರಿಗೆ ವೈದ್ಯಕೀಯ, ಶೈಕ್ಷಣಿಕ ನೆರವನ್ನು ಇತ್ತೀಚೆಗೆ ಒಕ್ಕೂಟದ ಮಂಗಳೂರಿನ ಕಾರ್ಯಾಲಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ, ಮುಂಬಯಿ ಉದ್ಯಮಿ, ಸಂಘಟಕ ಐಕಳ ಹರೀಶ್‌ ಶೆಟ್ಟಿ ಅವರು ಹಸ್ತಾಂತರಿಸಿದರು.

Advertisement

ಈ ವೇಳೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪದಾಧಿಕಾರಿಗಳಾದ ವಿಜಯಪ್ರಸಾದ್‌ ಆಳ್ವ, ಕೊಲ್ಲಾಡಿ ಬಾಲಕೃಷ್ಣ ರೈ, ಸಚ್ಚಿದಾನಂದ ಶೆಟ್ಟಿ ಉಪಸ್ಥಿತರಿದ್ದರು. ಅದೇ ರೀತಿ ಉಡುಪಿಯ ಕ್ಯಾನ್ಸರ್‌ ಪೀಡಿತ ಬಂಟ ಸಮಾಜದ ಬಂಧುವೊಬ್ಬರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಆರ್ಥಿಕ ನೆರವು  ನೀಡಿ ಸಹಕರಿಸಲಾಯಿತು. ಈ ವೇಳೆ ಇಂದ್ರಾಳಿ ಜಯಕರ ಶೆಟ್ಟಿ,  ಬಂಟರ ಸಂಘ ಮುಂಬಯಿ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next