Advertisement

ಆ.5 : ಪತ್ರಕರ್ತ ಜೋಗಿ ಅವರಿಗೆ ‘ವಡ್ಡರ್ಸೆ ಪ್ರಶಸ್ತಿ’ಪ್ರದಾನ

10:30 AM Aug 03, 2018 | Karthik A |

ಆ.5: ಪತ್ರಕರ್ತ ಜೋಗಿ ಅವರಿಗೆ ‘ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’ ಪ್ರದಾನ
ಉಡುಪಿ: ಈ ಬಾರಿಯ ‘ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’ಗೆ ಪತ್ರಕರ್ತ ಜೋಗಿ (ಗಿರೀಶ್‌ ರಾವ್‌ ಹತ್ವಾರ್‌) ಅವರು ಆಯ್ಕೆಯಾಗಿದ್ದು ಪ್ರಶಸ್ತಿ ಪ್ರದಾನ ಸಮಾರಂಭ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಆ.5ರಂದು ಸಂಜೆ 4.30ಕ್ಕೆ ಬ್ರಹ್ಮಾವರ ಬಸ್‌ ನಿಲ್ದಾಣ ಸಮೀಪದ ಬಂಟರ ಭವನದಲ್ಲಿ ಜರಗಲಿದೆ ಎಂದು ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Advertisement

ಸಮಾರಂಭವನ್ನು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ.ಮೋಹನ ಆಳ್ವ ಅವರು ಉದ್ಘಾಟಿಸಲಿದ್ದು ಶಾಸಕರಾದ ರಘುಪತಿ ಭಟ್‌, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕರ್ನಾಟಕ ರಾಜ್ಯ ಪಾನೀಯ ನಿಗಮದ ಕಾರ್ಯನಿವಾಹಕ ನಿರ್ದೇಶಕ ಶಾನಾಡಿ ಅಜಿತ್‌ ಕುಮಾರ್‌ ಹೆಗ್ಡೆ, ಗೀತಾನಂದ ಫೌಂಡೇಶನ್‌ ಪ್ರವರ್ತಕ ಆನಂದ ಸಿ.ಕುಂದರ್‌, ಉದ್ಯಮಿಗಳಾದ ಸುಗ್ಗಿ ಸುಧಾಕರ ಶೆಟ್ಟಿ, ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ, ಬ್ರಹ್ಮಾವರ ಬಂಟರ ಸಂಘದ ಸಂಚಾಲಕ ಸುದರ್ಶನ್‌ ಹೆಗ್ಡೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಮಾಧ್ಯಮ ಸಂವಾದ
ಮಧ್ಯಾಹ್ನ 2ರಿಂದ ‘ಪತ್ರಿಕೋದ್ಯಮ – ರಾಜಕಾರಣ-ಕಾನೂನು’ ಕುರಿತ‌ ಮಾಧ್ಯಮ ಸಂವಾದ ಜರಗಲಿದ್ದು ಮಾಜಿ ಶಾಸಕ ವೈ.ಎಸ್‌.ವಿ.ದತ್ತ, ನ್ಯಾಯವಾದಿ ಸುಧೀರ್‌ ಕುಮಾರ್‌ ಮರೊಳ್ಳಿ, ಉದ್ಯಮಿ ಸುರೇಶ್‌ ಶೆಟ್ಟಿ ಗುರ್ಮೆ ಪಾಲ್ಗೊಳ್ಳಲಿದ್ದಾರೆ. ಸಭಾ ಕಾರ್ಯಕ್ರಮದ ಅನಂತರ ಉಡುಪಿ ಪ್ರಸ್‌ ಕ್ಲಬ್‌ ಸದಸ್ಯರಿಂದ ಯಕ್ಷಗುರು ಬನ್ನಂಜೆ ಸಂಜೀವ ಸುವರ್ಣ ನಿರ್ದೇಶನದ ‘ವೀರ ಅಭಿಮನ್ಯು’ ಯಕ್ಷರೂಪಕ ಹಾಗೂ ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ‘ರಾಜಾರುದ್ರ ಕೋಪ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮ ಸಂಚಾಲಕ ವಸಂತ್‌ ಗಿಳಿಯಾರ್‌, ಸಂಘದ ಕೋಶಾಧಿಕಾರಿ ಮೋಹನ್‌ ಉಡುಪ, ಜಿಲ್ಲಾ ಸಂಘದ ಪ್ರತಿನಿಧಿ ಗಣೇಶ್‌ ಸಾೖಬ್ರಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next