Advertisement
ಸಸಿಹಿತ್ಲು ಬಿಜೆಪಿ ವತಿಯಿಂದ ದಿವ್ಯಾಮೃತ ಸಭಾಭವನದಲ್ಲಿ ನಡೆದ ಸಾರ್ವಜನಿಕ ಸಮ್ಮಾನವನ್ನು ಸ್ವೀಕರಿಸಿ ಅವರು ಮಾತನಾಡಿದರು. ಶ್ರೀ ಸಸಿಹಿತ್ಲು ಭಗವತೀ ಕ್ಷೇತ್ರದ ಪ್ರಧಾನ ಅರ್ಚಕ ಶ್ರೀನಿವಾಸ್ ಯಾನೆ ಅಪ್ಪು ಪೂಜಾರಿ ಆಶೀರ್ವಚನ ನೀಡಿದರು. ಜಿ.ಪಂ.ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯ ವಿನೋದ್ ಕುಮಾರ್ ಬೊಳ್ಳೂರು, ತಾ.ಪಂ. ಸದಸ್ಯ ಜೀವನ್ ಪ್ರಕಾಶ್ ಕಾಮೆರೊಟ್ಟು, ಕಿನ್ನಿಗೊಳಿ ಶಕ್ತಿ ಕೇಂದ್ರದ ಅಧ್ಯಕ್ಷ ಸಂತೋಷ್ ಆರ್. ಶೆಟ್ಟಿ, ಹಳೆಯಂಗಡಿ ಗ್ರಾಮ ಸಮಿತಿಯ ಅಧ್ಯಕ್ಷ ನರೇಂದ್ರ ಪ್ರಭು, ಬೂತ್ ಸಮಿತಿಯ ಅಧ್ಯಕ್ಷರಾದ ಸೂರ್ಯ ಕಾಂಚನ್, ಆನಂದ ಸುವರ್ಣ, ಧನರಾಜ್ ಕೋಟ್ಯಾನ್ ಉಪಸ್ಥಿತರಿದ್ದರು.
ಬಿಜೆಪಿ ಮೂಲ್ಕಿ ಮೂಡಬಿದಿರೆ ಕ್ಷೇತ್ರದ ಅಧ್ಯಕ್ಷ ಈಶ್ವರ ಕಟೀಲು ಅಧ್ಯಕ್ಷತೆ ವಹಿಸಿ, ಹಿಂದಿನ ಶಾಸಕರ ವರ್ತನೆಯಿಂದ ಸಸಿಹಿತ್ಲು ಭಾಗದ ಜನರು ಬಹಳಷ್ಟು ನೋವು ಅನುಭವಿಸಿದ್ದರಿಂದ ಅದು ಮತಗಳಾಗಿ ಪರಿವರ್ತನೆಗೊಂಡಿದೆ. ಹಿಂದೆಂದು ಕಾಣದ ಕಾರ್ಯ ಕರ್ತರ ಪಡೆಯನ್ನು ಸಸಿಹಿತ್ಲುವಿನಲ್ಲಿ ಕಂಡಿದ್ದೇವೆ. ಕಾರ್ಯಕರ್ತರು ನಿರೀಕ್ಷೆಗೂ ಮೀರಿ ಕೆಲಸ ಮಾಡಬೇಕಾಗಿದೆ ಎಂದರು.