Advertisement

Festival Special: ದೀಪಾವಳಿಗೆ ಹುಬ್ಬಳ್ಳಿ – ಬೆಂಗಳೂರು – ಮಂಗಳೂರು ವಿಶೇಷ ರೈಲು

01:50 AM Oct 20, 2024 | Team Udayavani |

ಮಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಬೆಂಗಳೂರು ಮಾರ್ಗವಾಗಿ ಹುಬ್ಬಳ್ಳಿಗೆ ವಿಶೇಷ ರೈಲು ಓಡಿಸಲು ನೈಋತ್ಯ ರೈಲ್ವೇ ವಲಯ ನಿರ್ಧರಿಸಿದೆ.

Advertisement

ನ.2ರಂದು ನಂ. 07311 ಹುಬ್ಬಳ್ಳಿ-ಮಂಗಳೂರು ಜಂಕ್ಷನ್‌ ವಿಶೇಷ ಎಕ್ಸ್‌ ಪ್ರಸ್‌ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್‌ನಿಂದ ಸಂಜೆ 4ಕ್ಕೆ ಹೊರಟು ಅದೇ ದಿನ ರಾತ್ರಿ 11.25ಕ್ಕೆ ಬೆಂಗಳೂರಿನ ಯಶವಂತಪುರ ಜಂಕ್ಷನ್‌ ರೈಲು ನಿಲ್ದಾಣ ತಲುಪಲಿದೆ. ಯಶವಂತಪುರ ರೈಲು ನಿಲ್ದಾಣದಿಂದ ರಾತ್ರಿ 11.55ಕ್ಕೆ ಹೊರಟು ಮರುದಿನ ಅಂದರೆ ನ.3ರಂದು ಬೆಳಗ್ಗೆ 11.45ಕ್ಕೆ ಮಂಗಳೂರು ಜಂಕ್ಷನ್‌ ತಲುಪಲಿದೆ.

ನ.3ರಂದು ನ. 07312 ಮಂಗಳೂರು ಜಂಕ್ಷನ್‌-ಹುಬ್ಬಳ್ಳಿ ವಿಶೇಷ ಎಕ್ಸ್‌ ಪ್ರಸ್‌ ರೈಲು ಮಂಗಳೂರು ಜಂಕ್ಷನ್‌ನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ರಾತ್ರಿ 10 ಗಂಟೆಗೆ ಯಶವಂತಪುರ ಜಂಕ್ಷನ್‌ ತಲುಪಲಿದೆ. ಯಶವಂತಪುರ ರೈಲು ನಿಲ್ದಾಣದಿಂದ ರಾತ್ರಿ 10.30ಕ್ಕೆ ಹೊರಟು ಮರುದಿನ ನ.4ರಂದು ಸೋಮವಾರ ಬೆಳಗ್ಗೆ 7ಕ್ಕೆ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್‌ ತಲುಪಲಿದೆ.

ಬಂಟ್ವಾಳ, ಕಬಕ ಪುತ್ತೂರು, ಸುಬ್ರಹ್ಮಣ್ಯ ರೋಡ್‌, ಸಕಲೇಶಪುರ, ಹಾಸನ ಜಂಕ್ಷನ್‌, ಚನ್ನರಾಯಪಟ್ಟಣ, ಕುಣಿಗಲ್‌, ಯಶವಂತಪುರ ಜಂಕ್ಷನ್‌, ತುಮಕೂರು, ಅರಸೀಕೆರೆ, ಬಿರೂರು, ದಾವಣಗೆರೆ, ಹರಿಹರ, ಶ್ರೀಮಹಾದೇವಪ್ಪ ಮಲ್ಲಾರ ಹಾವೇರಿ ರೈಲು ನಿಲ್ದಾಣಗಳಲ್ಲಿ ನಿಲುಗಡೆ ನೀಡಲಾಗಿದೆ. ರೈಲಿನಲ್ಲಿ 2 ಜನರಲ್‌ ಕೋಚ್‌, 5 ಸ್ಲಿàಪರ್‌ ಕ್ಲಾಸ್‌, 3 ತೃತೀಯ ದರ್ಜೆಯ ಎಸಿ, 2 ದ್ವಿತೀಯ ದರ್ಜೆಯ ಎಸಿ, 1 ಪ್ರಥಮ ದರ್ಜೆ/ಕ್ಯಾಬಿನ್‌ ಎಸಿ ಕೋಚುಗಳು ಇರಲಿವೆ ಎಂದು ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next