Advertisement

ಬೂಸ್ಟರ್ ಡೋಸ್ ಪಡೆದಿದ್ದರಿಂದ ಸಿದ್ದರಾಮಯ್ಯಗೆ ಜ್ವರ : ಡಿ.ಕೆ.ಶಿವಕುಮಾರ್

05:42 PM Jan 09, 2022 | Team Udayavani |

ಬೆಂಗಳೂರು : ಸಿದ್ದರಾಮಯ್ಯ ಅವರು ಬೂಸ್ಟರ್ ಡೋಸ್ ಪಡೆದಿದ್ದ ಹಿನ್ನಲೆಯಲ್ಲಿ ಅವರಿಗೆ ಜ್ವರ ಬಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

Advertisement

ಮೇಕೆದಾಟು ನೀರಿಗಾಗಿ ನಡಿಗೆಯಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ ಅವರು ಜ್ವರ, ಸುಸ್ತು ಮತ್ತು ಮೈಕೈ ನೋವು ಕಾಣಿಸಿಕೊಂಡ ಹಿನ್ನಲೆಯಳ್ಳಿ ಮೊದಲ ದಿನವೇ ಪಾದಯಾತ್ರೆ ಮೊಟಕು ಗೊಳಿಸಿ ಬೆಂಗಳೂರಿಗೆ ವಾಪಸಾಗಿದ್ದರು.

ವೈದ್ಯರು ವಿಶ್ರಾಂತಿಗೆ ಸೂಚಿಸಿದ ಕಾರಣ ಸಿದ್ದರಾಮಯ್ಯ ಪಾದಯಾತ್ರೆ ಬಿಟ್ಟು ಮಧ್ಯಾಹ್ನವೇ ಬೆಂಗಳೂರಿಗೆ ವಾಪಾಸಾಗಿದ್ದರು.

ಪಾದಯಾತ್ರೆ ಆರಂಭಕ್ಕೂ ಮುನ್ನ ಪ್ರಮುಖ ನಾಯಕರು ಕೋವಿಡ್ ಸೋಂಕಿನ ಆತಂಕದಲ್ಲಿ ಬೂಸ್ಟರ್ ಡೋಸ್ ಪಡೆದಿದ್ದರು.

ಸಿದ್ದರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡ ಬೆನ್ನಲ್ಲೇ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಟ್ವೀಟ್ ಮಾಡಿ “ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡಿದ್ದು ನನಗೆ ಕಳವಳ ಆಗಿದೆ. ಸಿದ್ಧರಾಮಯ್ಯನವರೇ ದಯವಿಟ್ಟು ವಿಶ್ರಾಂತಿ ತೆಗೆದುಕೊಳ್ಳಿ.ತಮ್ಮ ಆರೋಗ್ಯ ರಕ್ಷಣೆ ಮಹತ್ವದ್ದು.” ಎಂದು ಕಾಳಜಿ ತೋರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next