Advertisement

ಕ್ಷೇತ್ರ ಬದಲಾವಣೆ ಇನ್ನೂ ನಿರ್ಧರಿಸಿಲ್ಲ: ಮಹದೇವಪ್ಪ

06:35 AM Jan 04, 2018 | Team Udayavani |

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರ ಬದಲಾವಣೆ ಕುರಿತು ಇನ್ನೂ ನಿರ್ಧಾರವಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್‌.ಸಿ. ಮಹದೇವಪ್ಪ ತಿಳಿಸಿದರು. 

Advertisement

ಮಾಧ್ಯಮದವರೊಂದಿಗೆ ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನಿಂದ ಕಣಕ್ಕಿಳಿಯುವ ಕುರಿತು ಇನ್ನೂ ನಿರ್ಧರಿಸಿಲ್ಲ. ಮೇ ವರೆಗೆ ಟಿ.ನರಸಿಪುರದ ಶಾಸಕನಾಗಿರುತ್ತೇನೆ. ಮುಂದಿನ ಚುನಾವಣೆಯಲ್ಲಿ ಪಕ್ಷ ನನ್ನ ಕ್ಷೇತ್ರವನ್ನು ನಿರ್ಧರಿಸುತ್ತದೆ. ಈ ಕುರಿತು ಹೆಚ್ಚು ಮಾತನಾಡಲು ಬಯಸುವುದಿಲ್ಲ ಎಂದರು.

ನಂಜುಂಡೇಶ್ವರ ದೇವಸ್ಥಾನಕ್ಕೆ ಧರ್ಮದರ್ಶಿ ನೇಮಕ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಈ ವಿಷಯದಲ್ಲಿ ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎಂಬುದು ಸತ್ಯಕ್ಕೆ ದೂರ. ಕೊನೆ ಉಸಿರು ಇರುವವರೆಗೆ ನನ್ನ ಹಾಗೂ ಸಿದ್ದರಾಮಯ್ಯ ಮಧ್ಯೆ ಭಿನ್ನಾಭಿಪ್ರಾಯ ಬರಲು ಸಾಧ್ಯವಿಲ್ಲ ಎಂದರು

Advertisement

Udayavani is now on Telegram. Click here to join our channel and stay updated with the latest news.

Next