Advertisement

ಕ್ಷೇತ್ರ ಬದಲಾವಣೆ ಸುಳ್ಳು: ಪ್ರಿಯಾಂಕ್‌

06:55 AM Mar 29, 2018 | Team Udayavani |

ವಾಡಿ(ಕಲಬುರಗಿ): “ವಿಧಾನಸಭೆ ಚುನಾವಣೆಯಲ್ಲಿ ಚಿತ್ತಾಪುರ ಮತಕ್ಷೇತ್ರ ಬದಲಾವಣೆ ಮಾಡಿ ನಾನು ಬೇರೊಂದು ಕ್ಷೇತ್ರಕ್ಕೆ ಹೋಗುತ್ತಿದ್ದೇನೆ ಎಂದು ಹಬ್ಬಿಸಲಾಗಿರುವ ವದಂತಿ ಸುಳ್ಳು. ನಾನು ಚಿತ್ತಾಪುರ ಕ್ಷೇತ್ರ ಬಿಟ್ಟು ಹೋಗುವುದಿಲ್ಲ’ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟಪಡಿಸಿದ್ದಾರೆ.

Advertisement

ಸಚಿವ ಖರ್ಗೆ ಚಿತ್ತಾಪುರ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರದ ಬೇಡಿಕೆಯಿಟ್ಟಿದ್ದಾರೆ ಎಂದು ಮಂಗಳವಾರ ದೃಶ್ಯ ಮಾಧ್ಯಮವೊಂದರಲ್ಲಿ ಪ್ರಸಾರವಾಗಿತ್ತು. ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತು. ಈ ಕುರಿತು “ಉದಯವಾಣಿ’ ಯೊಂದಿಗೆ ಮಾತನಾಡಿ, “ಕ್ಷೇತ್ರ ಬಿಟ್ಟು ಪಲಾಯನ ಮಾಡುವುದಿಲ್ಲ. ಈ ಕುರಿತು ಕ್ಷೇತ್ರದ ಜನರಲ್ಲಿ, ಕಾರ್ಯಕರ್ತರಲ್ಲಿ ಹಾಗೂ ಅಭಿಮಾನಿಗಳಲ್ಲಿ ಗೊಂದಲ ಬೇಡ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next