Advertisement

ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ

04:44 PM Jul 15, 2019 | Team Udayavani |

ಶಿರಾ: ತಾಲೂಕು ಎಆರ್‌ಟಿಒ ಕಚೇರಿಯನ್ನು ಮಧುಗಿರಿಗೆ ವರ್ಗಾಯಿಸಿ ರುವುದು ಸರಿಯಲ್ಲ. ಆದೇಶ ಹಿಂಪಡೆ ಯಬೇಕು ಎಂದು ದಲಿತ ಮುಖಂಡ ರಾಜಸಿಂಹ ಆಗ್ರಹಿಸಿದರು.

Advertisement

ಪ್ರವಾಸಿ ಮಂದಿರದಲ್ಲಿ ತಾಲೂಕು ಕನ್ನಡಪರ ಸಂಘಟನೆಗಳ ಒಕ್ಕೂಟ ಮತ್ತು ಶಿರಾ ಜಿಲ್ಲಾ ಹೋರಾಟ ಸಮಿತಿ ಹಾಗೂ ದಲಿತ ಸಂಘರ್ಷ ಸಮಿತಿಯಿಂದ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

ಶಿರಾ ತಾಲೂಕು ತುಮಕೂರು ಜಿಲ್ಲೆಯಲ್ಲೇ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ರಾಜಧಾನಿಗೆ ಸಮೀಪವಾಗಿರುತ್ತದೆ. ಜಿಲ್ಲಾ ಕೇಂದ್ರವಾಗುವ ಎಲ್ಲಾ ಲಕ್ಷಣಗಳಿದ್ದು, ತಾಲೂಕಿನ ಆದಾಯದ ಮೇಲೆ ಕಣ್ಣಿಟ್ಟು ಮಧುಗಿರಿ ಎಆರ್‌ಟಿಒ ಕಚೇರಿ ವ್ಯಾಪ್ತಿಗೆ ಒಳಪಡಿಸಲಾಗಿದೆ. ಒಂದು ವೇಳೆ ಈ ಆದೇಶ ಹಿಂಪಡೆಯದಿದ್ದರೆ ತಾಲೂಕಿನ ಎಲ್ಲಾ ಕನ್ನಡಪರ ಸಂಘಟನೆಗಳು, ರಾಜಕೀಯ ಪ್ರತಿನಿಧಿಗಳು ಮತ್ತು ಸಾರ್ವಜನಿಕರು ಸೇರಿ ಉಗ್ರ ಪ್ರತಿ ಭಟನೆ ಮಾಡಬೇಕಾ ಗುತ್ತದೆ ಎಂದು ಎಚ್ಚರಿಸಿದರು. ಶಿರಾ ತಾಲೂಕು ಆಟೋ ಚಾಲಕರ ಸಂಘದ ಅಧ್ಯಕ್ಷ ಸಿದ್ದೇಶ್‌ ಯಾದವ್‌, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ವಿನಯ್‌ (ಕಿಶೋರ್‌), ಶಿರಾ ಅಭಿವೃದ್ಧಿ ವೇದಿಕೆ ರಘುರಾವ್‌, ನಿವೃತ್ತ ನೌಕರರ ಸಂಘದ ಕಾರ್ಯದರ್ಶಿ ನಿಂಗಪ್ಪ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯದರ್ಶಿ ಬಾಬು, ದಾದು, ಜಲೀಲ್, ಪತಿ, ರಮೇಶ್‌ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next