Advertisement

ಶೀಘ್ರವೇ 15 ಸಾವಿರ ಶಿಕ್ಷಕರ ಭರ್ತಿ: ಸಿಎಂ ಬಸವರಾಜ ಬೊಮ್ಮಾಯಿ

12:21 AM Jun 12, 2022 | Team Udayavani |

ಬೆಳಗಾವಿ: ನಮ್ಮ ಸರಕಾರ ಬಂದ ಮೇಲೆ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. 15 ಸಾವಿರ ಶಿಕ್ಷಕರನ್ನು ಶೀಘ್ರವೇ ಭರ್ತಿ ಮಾಡಲಾಗುವುದು. ಕಾಲೇಜಿನಲ್ಲಿ 6 ಸಾವಿರ ಸ್ಮಾರ್ಟ್‌ ಕ್ಲಾಸ್‌ಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ನಗರದಲ್ಲಿ ನಡೆದ ವಾಯವ್ಯ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೊದಲ ಬಾರಿಗೆ ಒಂದೇ ವರ್ಷದಲ್ಲಿ ಏಳು ಸಾವಿರ ಶಾಲಾ ಕೊಠಡಿಗಳನ್ನು ಗ್ರಾಮೀಣ ಭಾಗದಲ್ಲಿ ಕಟ್ಟಲು ಅನುದಾನ ನೀಡಿ, ಇದೇ ವರ್ಷದಲ್ಲಿ ಪೂರ್ತಿಗೊಳಿಸಲು ಸೂಚಿಸ ಲಾಗಿದೆ.

ಏಳು ಸರಕಾರಿ ಎಂಜಿನಿಯರಿಂಗ್‌ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಮೇಲ್ದರ್ಜೆಗೆ ಏರಿಸಲಾಗುವುದು. ಜತೆಗೆ ವಿದೇಶದ ವಿವಿಯೊಂದಿಗೆ ಒಡಂಬಡಿಕೆ ಮಾಡಲಾಗುವುದು. ಆರ್‌ ಆ್ಯಂಡ್‌ ಡಿ ನೀತಿ ಮಾಡಲಾಗುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next