Advertisement

ವಿಧಾನಸೌಧದಲ್ಲಿ ಮಾರಾಮಾರಿಗೆ ಮುಂದಾದ ಬಿಜೆಪಿ ನಾಯಕರು: ಕಮಲ ಪಾಳಯದ ಒಳಜಗಳ ಸ್ಪೋಟ!

01:52 PM Sep 21, 2020 | keerthan |

ಬೆಂಗಳೂರು: ರಾಜ್ಯದ ಬಿಜೆಪಿ ನಾಯಕರ ಒಳಜಗಳ ಇಂದು ವಿಧಾನಸೌಧದಲ್ಲೇ ಸ್ಪೋಟವಾಗಿದೆ. ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಎದುರುಗಡೆಯೇ ಬಿಜೆಪಿ ನಾಯಕರ ಗಲಾಟೆ ಮಾಡಿಕೊಂಡ ಪ್ರಸಂಗ ನಡೆದಿದೆ.

Advertisement

ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಹಾಗೂ ಸಚಿವ ನಾರಾಯಣಗೌಡ ನಡುವೆ ಗಲಾಟೆ ನಡೆದಿದ್ದು, ಮಾತಿನ ಚಕಮಕಿ ತಾರಕಕ್ಕೇರಿ ನಂತರ ಕುರ್ಚಿಗಳನ್ನು ತಳ್ಳಾಡುವಷ್ಟು ಸ್ವರೂಪ ಪಡೆದಿದೆ.

ಯಾವ ವಿಚಾರಕ್ಕೆ ಈ ಗಲಾಟೆ ನಡೆದಿದೆ ಎಂದು ಸ್ಪಷ್ಟವಾಗಿಲ್ಲ. ನೀನೇನು ಅಂತ ನಂಗ್ ಗೊತ್ತು ಅಸಮರ್ಥ ಸಚಿವ ನೀನು ಎಂದು ನಾರಾಯಣಗೌಡ ವಿರುದ್ಧ ಬೆಳ್ಳಿ ಪ್ರಕಾಶ್ ಆರೋಪ ಮಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ಸಚಿವ ಮತ್ತು ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದೆ.

ಇದನ್ನೂ ಓದಿ: ಕುಟುಂಬ ಹಸ್ತಕ್ಷೇಪದಿಂದಲೇ ಬಿಎಸ್ ವೈ ಅಧಿಕಾರ ಕಳೆದುಕೊಳ್ಳುತ್ತಾರೆ: ಧ್ರುವನಾರಾಯಣ್

Advertisement

ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವರಾದ ಈಶ್ವರಪ್ಪ, ಸೋಮಣ್ಣ ಸಮ್ಮುಖದಲ್ಲೇ ಗಲಾಟೆ ನಡೆದಿದೆ. ಇಬ್ಬರೂ ನಾಯಕರು ಚೇರ್ ಗಳನ್ನ ತಳ್ಳಿ ಹೊಡೆದಾಟಕ್ಕೆ ಯತ್ನ ಮಾಡಿದ್ದಾರೆ ಎಂದು ವರದಿಯಾಗಿದೆ.

ಕ್ಷೇತ್ರದ ಅಭಿವೃದ್ದಿ ವಿಚಾರದಲ್ಲಿ ಗಲಾಟೆ ನಡೆಯಿತಾ ಅಥವಾ ಮೂಲ ಮತ್ತು ವಲಸಿಗ ಶಾಸಕರ ಬಿಕ್ಕಟ್ಟು ಕಾರಣವಾಗಿರಬಹುದೇ ಎಂಬ ಮಾತುಗಳು ವಿಧಾನಸೌಧದ ಪಡಸಾಲೆಯಲ್ಲಿ ಕೇಳಿಬರುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next