Advertisement

ಪರಿಷತ್ ಫೈಟ್: ಹುಬ್ಬಳ್ಳಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕರ ನಡುವೆ ಹೊಯ್ ಕೈ!

12:43 PM Dec 01, 2021 | Team Udayavani |

ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆ ಕುರಿತಾಗಿ ಇಲ್ಲಿನ ಹೋಟೆಲ್ ವೊಂದರಲ್ಲಿ ನಡೆದ ಬಿಜೆಪಿ ಸಭೆಯಲ್ಲಿ, ಹಾವೇರಿ ಜಿಲ್ಲೆಯ ಶಾಸಕರಿಬ್ಬರ ನಡುವೆ ಗಲಾಟೆಯಾಗಿದ್ದು, ಪರಿಸ್ಥಿತಿ ಎರಡು ಕಡೆಯವರ ನಡುವೆ ಕೈ – ಕೈ ಮಿಲಾಯಿಸುವ ಹಂತಕ್ಕೂ ತಲುಪಿತ್ತು.

Advertisement

ಹಾವೇರಿ ಜಿಲ್ಲೆ ರಾಣೆಬೆನ್ನೂರು ಶಾಸಕ ಅರುಣ ಕುಮಾರ, ವಿಧಾನ ಪರಿಷತ್ತು ಸದಸ್ಯ, ಮಾಜಿ ಸಚಿವ ಆರ್. ಶಂಕರ್ ನಡುವೆ ಚುನಾವಣೆ ಉಸ್ತುವಾರಿ ವಿಚಾರವಾಗಿ ಗಲಾಟೆಯಾಗಿದೆ.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲೇ ಇಬ್ಬರು ಜಗಳವಾಡಿಕೊಂಡಿದ್ದಾರೆ.

ಇದನ್ನೂ ಓದಿ:ಶಾಸಕ ವಿಶ್ವನಾಥ್ ಹತ್ಯೆ ಸಂಚಿನ ಬಗ್ಗೆ ಮಾಹಿತಿಯಿಲ್ಲ: ಸಿಎಂ ಬೊಮ್ಮಾಯಿ

ಶಂಕರ ವಿರುದ್ದ ತೀವ್ರ ಗರಂ ಆಗಿದ್ದ ಅರುಣ ಕುಮಾರ ಅವರನ್ನು ಬಿಜೆಪಿಯ ಕೆಲವರು ಸಮಾಧಾನ ಪಡಿಸಲು ಯತ್ನಿಸಿದರೆ, ಇನ್ನು ಕೆಲವರು ಶಂಕರ ಅವರನ್ನು ಹೊಟೇಲ್ ನಿಂದ ಹೊರ ಕರೆದುಕೊಂಡು ಬಂದಿದ್ದು ಕಂಡು ಬಂದಿತು.

Advertisement

ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳನ್ನೊಳಗೊಂಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣಾ ಸಭೆಯನ್ನು ಬುಧವಾರ ಹುಬ್ಬಳ್ಳಿಯಲ್ಲಿ ಕರೆಯಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next