Advertisement

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ವೀಕ್ಷಣೆ ವಿಚಾರ:ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ವಾಗ್ವಾದ

11:05 AM Jan 30, 2021 | Team Udayavani |

ಬಂಟ್ವಾಳ: ಸರಪಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ವೀಕ್ಷಣೆಗೆ ಸಂಬಂಧಿಸಿದಂತೆ ಬಿಜೆಪಿ- ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಮಧ್ಯೆ ಜಟಾಪಟಿ ನಡೆದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

Advertisement

ಬಹುಗ್ರಾಮ ಕುಡಿಯುವ ನೀರಿನ ಯೋಜನೆಯು ಜ. 31 ರಂದು ರಾಜ್ಯ ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಅವರ ಉದ್ಘಾಟನೆ ನೆರವೇರಿಸಲಿದ್ದಾರೆ. ಇದಕ್ಕೆ ಮುಂಚಿತವಾಗಿ ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಜನಪ್ರತಿನಿಧಿಗಳು‌ ವೀಕ್ಷಣೆಗೆ ಆಗಮಿಸಿದ್ದರು.

ಇದನ್ನೂ ಓದಿ:ಪಂ. ರಾಜ್‌ ಸಂಸ್ಥೆಗಳಿಗೆ ಸೌರವಿದ್ಯುತ್‌ ಬಲ : ದಕ್ಷಿಣ ಕನ್ನಡ, ಉಡುಪಿಗಳಲ್ಲಿ ಶೀಘ್ರ ಅಳವಡಿಕೆ

ಈ ವೇಳೆ ಮಾಜಿ ಸಚಿವ ಬಿ.ರಮಾನಾಥ ರೈಅವರು ಕೂಡ ಜತೆಗಿದ್ದರು. ಆದರೆ ಸ್ಥಳದಲ್ಲಿ ಬಿಜೆಪಿಯವರು ಸೇರಿದ್ದ ಹಿನ್ನೆಲೆಯಲ್ಲಿ ಪೊಲೀಸರು ಯೋಜನಾ ಘಟಕದ ಗೇಟ್ ಹಾಕಿ ತಡೆದರು. ಈ ವೇಳೆ ಎರಡೂ ಪಕ್ಷಗಳ ಪ್ರಮುಖರ ಮಧ್ಯೆ ಜಟಾಪಟಿ ನಡೆದಿದೆ.

Advertisement

ಇದನ್ನೂ ಓದಿ: ನೂತನ ಕೃಷಿ ಕಾಯ್ದೆ; ಹೋರಾಟದಿಂದ ಹಿಂದೆ ಸರಿದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ

Advertisement

Udayavani is now on Telegram. Click here to join our channel and stay updated with the latest news.

Next