Advertisement

ಮನೆಯೊಂದು ಮೂರು ಬಾಗಿಲಾದ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್: ಕಚೇರಿಯಲ್ಲೇ ಹೊಡೆದಾಟ

12:52 PM Jul 24, 2022 | Team Udayavani |

ಚಿಕ್ಕಮಗಳೂರು: ಚುನಾವಣಾ ವರ್ಷದಲ್ಲಿ ಜನರ ನಡುವೆ ಪ್ರಚಾರದಲ್ಲಿ ತೊಡಗಬೇಕಿದ್ದ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಹೊಡೆದಾಟದಲ್ಲಿ ತೊಡಗಿದ್ದಾರೆ. ಇಂದು ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಹೊಡೆದಾಡಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮಾರಾಮಾರಿ ನಡೆಸಿದರು.

Advertisement

ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಮತ್ತು ಕಾರ್ಯದರ್ಶಿ ನಿತೀಶ್ ಗುಂಪುಗಳ ಮಧ್ಯೆ ಜಗಳ ಉಂಟಾಗಿದೆ. ಸಂತೋಷ್ ಇತ್ತೀಚೆಗೆ ಕಾರ್ಯದರ್ಶಿ ಹುದ್ದೆಯಿಂದ ನಿತೀಶ್ ನನ್ನ ತೆಗೆದುಹಾಕಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಪರಸ್ಪರ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿದೆ.

ಇದನ್ನೂ ಓದಿ:ಪೊಲೀಸ್‌ ಆಯಕ್ತರ ಕಚೇರಿ ಬಳಿ ಲಕ್ಷಾಂತರ ರೂ. ಕಳ್ಳತನ: ಆರೋಪಿಗಳು ಪರಾರಿ

ಯೂತ್ ಕಾಂಗ್ರೆಸ್ ಕಾರ್ಯಕರ್ತರ ಹೊಡೆದಾಟದಿಂದ ಬೇಸತ್ತ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ರಾಜೀನಾಮೆಗೆ ಮುಂದಾಗಿದ್ದಾರೆ. ಒಟ್ಟಿನಲ್ಲಿ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಎನ್ನವುದು ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next