Advertisement

ಕಲಬುರಗಿ:  ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ

01:36 PM Apr 21, 2023 | Team Udayavani |

ಕಲಬುರಗಿ: ಶಹಾಬಾದ ತಾಲೂಕಿನ ಮರತೂರ ಗ್ರಾಮದ  ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿರುವ ಘಟನೆ ಅಂಬೇಡ್ಕರ್ ಸರ್ಕಲ್ ಬಳಿ ನಡೆದಿದೆ.

Advertisement

ಯಲ್ಲಾಲಿಂಗ ಪೂಜಾರಿ ಹಲ್ಲೆಗೊಳಗಾದ ಯುವಕ.

ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ‌ ಮತ್ತಿಮೂಡ್ ಪ್ರಚಾರ ಕಾರ್ಯ ಮುಗಿಸಿ ಹೋಗುತ್ತಿರುವ ವೇಳೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ʼದಸರಾʼ ಓಟಿಟಿ ಎಂಟ್ರಿಗೆ ಡೇಟ್‌ ಫಿಕ್ಸ್: ʼಧರಣಿʼ ನೋಡಲು ಫ್ಯಾನ್ಸ್‌ ವೇಟಿಂಗ್

ಗ್ರಾಮದ ಅಂಬೇಡ್ಕರ್ ಸರ್ಕಲ್ ಹತ್ತಿರ ಬಸವರಾಜ ಮತ್ತಿಮೂಡ್ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಯುವಕ ಬಿಜೆಪಿ ಪರ ಜೈಕಾರ ಹಾಕಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಗಾಯಗೊಂಡ ಯುವಕ ಕಲಬುರಗಿಯ ಜೀಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಿಸಲಾಗುತ್ತಿದೆ.

Advertisement

ಶಹಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next