Advertisement

Fight: ಕ್ರಿಕೆಟ್‌ ಆಡುವ ವಿಚಾರಕ್ಕೆ ಗಲಾಟೆ: ಆರೋಪಿ ವಶಕ್ಕೆ

11:59 AM Sep 03, 2023 | Team Udayavani |

ಬೆಂಗಳೂರು: ಕ್ರಿಕೆಟ್‌ ಆಡುವ ವಿಚಾರಕ್ಕೆ ಯುವಕರ ಗುಂಪೊಂದು ಪರಿಚಿತ ಯುವಕನಿಗೆ ಬ್ಯಾಟ್‌ನಿಂದ ಹಲ್ಲೆ ನಡೆಸಿರುವ ಘಟನೆ ಮಡಿವಾಳ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ವೆಂಕಟಾಪುರ ನಿವಾಸಿ ಲಿಖಿತ್‌(21) ಹಲ್ಲೆಗೊಳಗಾದ ಯುವಕ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿ­ದ್ದನೆ. ಈ ಸಂಬಂಧ ಶಿವು ಎಂಬಾ­ತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಇನ್ನೂ ಕೆಲವರು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ಹೇಳಿದರು.

ಹಲ್ಲೆಗೊಳಗಾದ ಲಿಖಿತ್‌ ಹಾಗೂ ಆರೋಪಿಗಳು ಪರಸ್ಪರ ಪರಿಚಿತರು. ಶುಕ್ರವಾರ ಸಂಜೆ ವೆಂಕಟಾಪುರದ ಕಾರ್ಮೆಲ್‌ ಕಾನ್ವೆಂಟ್‌ ಬಳಿ ಕ್ರಿಕೆಟ್‌ ಆಡುತ್ತಿದ್ದರು. ಆಗ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿದೆ. ಈ ವೇಳೆ ಶಿವು ಹಾಗೂ ಆತನ ಸಹಚರರು ಕ್ರಿಕೆಟ್‌ ಬ್ಯಾಟ್‌ನಿಂದ ಲಿಖಿತ್‌ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಮುಂದಾದ ಲಿಖೀತ್‌ನನ್ನು ಅಟ್ಟಾಡಿಸಿಕೊಂಡು ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಹಲ್ಲೆ ದೃಶ್ಯ ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ‌ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next