Advertisement

Ramanagara: ಟೋಲ್ ವಿಚಾರದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ

11:27 AM Jun 05, 2023 | Team Udayavani |

ರಾಮನಗರ: ಟೋಲ್ ವಿಚಾರದ ಗಲಾಟೆಯು ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಬಿಡದಿ ಬಳಿಯ ಶೇಷಗಿರಿ ಟೋಲ್ ನಲ್ಲಿ ನಡೆದಿದೆ.

Advertisement

ಟೋಲ್ ನಲ್ಲಿ ಕೆಲಸ ಮಾಡುತ್ತಿದ್ದ ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆಯ ಸಿಕ್ಕೆಪಾಳ್ಯ ನಿವಾಸಿ ಪವನ್ (30 ವ) ಎಂಬವನ ಹತ್ಯೆಯಾಗಿದೆ. ಹೆಜ್ಜಾಲ ಸಮೀಪ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.

ರವಿವಾರ ರಾತ್ರಿ ಟೋಲ್ ಕಟ್ಟುವ ವಿಚಾರಕ್ಕೆ ಬೆಂಗಳೂರು ಮೂಲದ ಯುವಕರ ತಂಡ ಪವನ್ ಜೊತೆ ಗಲಾಟೆ ಮಾಡಿತ್ತು. ಟೋಲ್ ಬಳಿ ಗಲಾಟೆ ಮಾಡಿ ಹೋಗಿದ್ದ ತಂಡವು ಪವನ್ ಕೆಲಸ ಮುಗಿಸಿ ಮನೆಗೆ ಹೋಗುವಾಗ ಹಲ್ಲೆ ಮಾಡಿದೆ. ದೊಣ್ಣೆಯಿಂದ ತಲೆಗೆ ಹೊಡೆದು ಪವನ್ ಹತ್ಯೆ ಮಾಡಲಾಗಿದೆ.

ಇದನ್ನೂ ಓದಿ:ಡಿವೈಡರ್ ದಾಟಿ ಪಲ್ಟಿಯಾದ ಕಾರು ಮತ್ತೊಂದು ಕಡೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿಗೆ ಢಿಕ್ಕಿ

ಹೆಜ್ಜಾಲ ಸಮೀಪ ಕೊಲೆ ಮಾಡಿರುವ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.  ಮೃತದೇಹವನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Advertisement

ಸ್ಥಳಕ್ಕೆ ಬಿಡದಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next