Advertisement

ಸಾಮೂಹಿಕ ನಾಯಕತ್ವ‌ ಮೂಲಕ ಹೋರಾಟ

10:04 AM Aug 01, 2018 | Harsha Rao |

ಹೊಸದಿಲ್ಲಿ: 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ವಿಪಕ್ಷಗಳು ಸಾಮೂಹಿಕ ನಾಯಕತ್ವದ ಮೂಲಕ ಎದುರಿಸಲಿವೆ ಎಂದು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಈ ಮೂಲಕ ಪ್ರಸ್ತಾವಿತ ಫೆಡರಲ್‌ ಒಕ್ಕೂಟವು ಚುನಾವಣೆಗೆ ಮುನ್ನ ಪ್ರಧಾನಿ ಅಭ್ಯರ್ಥಿಯ ಹೆಸರನ್ನು ಬಹಿರಂಗ ಪಡಿಸುವುದಿಲ್ಲ ಎಂಬ ಸುಳಿವನ್ನು ಅವರು ನೀಡಿದ್ದಾರೆ. ಮಮತಾ ಅವರ ಈ ಹೇಳಿಕೆಯು, ವಿಪಕ್ಷಗಳ ಮೈತ್ರಿಕೂ ಟದ ಪ್ರಧಾನಿ ಅಭ್ಯರ್ಥಿಯಾಗುವ ಕನಸು ಹೊತ್ತಿದ್ದ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ಹಿನ್ನಡೆಯಾದಂತಾಗಿದೆ.

Advertisement

ಇದೇ ವೇಳೆ, ವಿಪಕ್ಷಗಳ ಒಗ್ಗಟ್ಟನ್ನು ಪ್ರದರ್ಶಿಸಲು ಜ. 19ರಂದು ಕೋಲ್ಕತ್ತಾದಲ್ಲಿ ಬೃಹತ್‌ ರ್ಯಾಲಿ ನಡೆಸಲು ಮಮತಾ ನಿರ್ಧರಿಸಿದ್ದಾರೆ. ಅದಕ್ಕಾಗಿ ಸಿದ್ಧತೆ ಆರಂಭಿಸಿದ್ದು, ಬುಧವಾರ ಯುಪಿಎ ಅಧ್ಯಕ್ಷೆ ಸೋನಿಯಾ ಸಹಿತ ವಿಪಕ್ಷಗಳ ಪ್ರಮುಖ ನಾಯಕರನ್ನು ಭೇಟಿಯಾಗಿ, ಆಹ್ವಾನ ನೀಡಲಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next