Advertisement

“ಯಡಿಯೂರಪ್ಪ ಅವರನ್ನು ಕಡೆಗಣಿಸಿದರೆ ಹೋರಾಟ’

11:37 PM Oct 01, 2019 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಬಿಜೆಪಿಯಲ್ಲಿ ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿರುವ ವೀರಶೈವ ಲಿಂಗಾಯತ ಯುವ ಬ್ರಿಗೇಡ್‌ ಇದೇ ಪ್ರವೃತ್ತಿ ಮುಂದುವರಿದರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ರಿಗೇಡ್‌ ರಾಜ್ಯಾಧ್ಯಕ್ಷ ಬಿ.ಆರ್‌.ಮಹೇಶ್‌, ಯಡಿಯೂರಪ್ಪ ಅವರ ವಿರುದ್ಧ ಕೆಲ ನಾಯಕರು ಹೇಳಿಕೆ ನೀಡುತ್ತಿದ್ದಾರೆ.

Advertisement

ಅಲ್ಲದೆ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲು ಏಕ ಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಬೆಂಗಳೂರು ಮೇಯರ್‌ ಮತ್ತು ಉಪಮೇಯರ್‌ ಚುನಾವಣೆಯಲ್ಲಿ ಮುಖ್ಯಮಂತ್ರಿಗಳ ನಿಲುವನ್ನು ಕಡೆಗಣಿಸಿದ್ದಾರೆ ಎಂದು ದೂರಿದರು. ಮುಖ್ಯಮಂತ್ರಿಗಳ ಸ್ಥಾನಕ್ಕೆ ಅಗೌರವ ಉಂಟುಮಾಡಲು ಯತ್ನಿಸಲಾಗುತ್ತಿದೆ.

ಆದ್ದರಿಂದ ರಾಜ್ಯದ ನಾಯಕರಿಗೆ ಯಡಿಯೂರಪ್ಪ ನೇತೃತ್ವದಲ್ಲಿ ಆಡಳಿತ ನಡೆಸುವಂತೆ ಕೇಂದ್ರದ ನಾಯಕರು ಸೂಚಿಸಬೇಕೆಂದು ಒತ್ತಾಯಿಸಿದರು. ರಾಜ್ಯದಲ್ಲಿ ಪಕ್ಷ ಸಂಘಟಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೊಡುಗೆ ಹೆಚ್ಚಿದೆ. ಅವರ ಕಾರ್ಯವೈಖರಿಯಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಲೋಕಸಭಾ ಚುನಾವಣೆಯಲ್ಲಿಯೂ ಯಾರೂ ನಿರೀಕ್ಷಿಸದ ಮಟ್ಟಿಗೆ ರಾಜ್ಯದಿಂದ ಹೆಚ್ಚಿನ ಸ್ಥಾನ ಗಳಿಸುವಲ್ಲಿಯೂ ಯಡಿಯೂರಪ್ಪ ಅವರ ಪಾತ್ರ ದೊಡ್ಡದಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next