Advertisement

3ನೇ ದಿನಕ್ಕೆ ಕಾಲಿಟ್ಟ ಹೋರಾಟ

02:33 PM Dec 31, 2017 | Team Udayavani |

ಯಾದಗಿರಿ: ಅಂಬೇಡ್ಕರ್‌ ಆವಾಸ ಯೋಜನೆಯಡಿ ಮನೆ ನಿರ್ಮಾಣಕ್ಕೆ ನಿವೇಶನ ಮಂಜೂರಿಗೆ ಸರಕಾರದ ಸ್ಪಷ್ಟ ನಿರ್ದೇಶನ ಇದ್ದರೂ ನಿರ್ಲಕ್ಷ್ಯ ತೋರುತ್ತಿರುವ ಜಿಪಂ ಆಡಳಿತದ ಧೋರಣೆ ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘ ನಡೆಸುತ್ತಿರುವ ಧರಣಿ ಶನಿವಾರ 3ನೇ ದಿನಕ್ಕೆ ಕಾಲಿರಿಸಿದೆ.

Advertisement

ಕೆಪಿಆರ್‌ಎಸ್‌ ಜಿಲ್ಲಾಧ್ಯಕ್ಷ ಯಲ್ಲಪ್ಪ ಚಿನ್ನಾಕಾರ ನೇತೃತ್ವದಲ್ಲಿ ನಗರದ ಜಿಪಂ ಕಚೇರಿ ಎದುರು ನಡೆಯುತ್ತಿರುವ ಅರ್ನಿದಿಷ್ಟ ಧರಣಿಯಲ್ಲಿ ಕಾರ್ಯಕರ್ತರು ಜಿಪಂ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಮಿತಿ ನಿವೇಶನಗಳನ್ನು ಮಂಜೂರು ಮಾಡಲು ಗ್ರಾಪಂ ನಡುವಳಿಕೆ ಪಾಸ್‌ ಮಾಡಲು ಒತ್ತಾಯಿಸಿದರು.

ಸರಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದು, ದೇವರು ಕೊಟ್ಟರೂ ಪೂಜಾರಿ ಕೊಡಲಿಲ್ಲ ಎಂಬಂತೆ ಸುರಪುರದಲ್ಲಿ ಅಧಿಕಾರಿಗಳು ವರ್ತಿಸುತ್ತಿದ್ದು, ನಿವೇಶನಕ್ಕೆ ಅರ್ಜಿ ಸಲ್ಲಿಸಿದ ಎಲ್ಲ ಎಸ್ಸಿ ಎಸ್ಟಿ ಫಲಾನುಭವಿಗಳಿಗೆ ವಿತರಣೆ ಮಾಡಬೇಕೆಂಬ ನಿಯಮ ಇದ್ದರೂ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು. 

ಪ್ರತಿಭಟನೆಯಲ್ಲಿ ಸುರಪುರ ತಾಲೂಕು ಅಧ್ಯಕ್ಷ ಧರ್ಮಣ್ಣ ದೊರಿ, ಮುಖಂಡರಾದ ರಾಮಯ್ಯ ಭೋವಿ, ಚಂದ್ರಾಮ ಗೌಡ, ಸಿದ್ದಲಿಂಗಯ್ಯ ವಗ್ಗಾ, ಶಿವರಾಜ ದೊರಿ, ತಂಗಮ್ಮ, ಹಣಮಂತಿ, ಚೆನ್ನಮ್ಮ, ಶಿವಕಾಂತಮ್ಮ, ಯಲ್ಲಮ್ಮ ಸೇರಿದಂತೆ ಅನೇಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next