Advertisement

ಮೆರವಣಿಗೆ : ಕಾಂಗ್ರೆಸ್‌ ಕಾರ್ಯಕರ್ತರ ವಿರುದ್ಧ ಕೇಸು ದಾಖಲು

11:28 PM Aug 05, 2023 | Team Udayavani |

ಕಾಸರಗೋಡು: ಮೋದಿ ಉಪನಾಮೆ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಸೂರತ್‌ನ ನ್ಯಾಯಾಲಯ ನೀಡಿದ ಶಿಕ್ಷಗೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿರುವುದನ್ನು ಸ್ವಾಗತಿಸಿ ಕಾಂಗ್ರೆಸ್‌ ನೇತೃತ್ವದಲ್ಲಿ ನಗರದಲ್ಲಿ ನಡೆದ ಮೆರವಣಿಗೆ ಸಂಬಂಧ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಪಿ.ಕೆ.ಫೈಝಲ್‌ ಮತ್ತು ಮನಾಫ್‌ ನುಳ್ಳಿಪ್ಪಾಡಿ ಸಹಿತ 20 ಮಂದಿ ಕಾಂಗ್ರೆಸ್‌ ಕಾರ್ಯಕರ್ತರ ವಿರುದ್ಧ ಕಾಸರಗೋಡು ಪೊಲೀಸರು ಕೇಸು ದಾಖಲಿಸಿದ್ದಾರೆ.

Advertisement

ಪೊಲೀಸರ ಅನುಮತಿ ಪಡೆಯದೆ ಮೆರವಣಿಗೆ ನಡೆಸಿದ್ದು ಮತ್ತು ಆ ಮೂಲಕ ರಸ್ತೆಯಲ್ಲಿ ಸಾರಿಗೆ ಸಂಚಾರಕ್ಕೆ ಅಡಚಣೆ ಸೃಷ್ಟಿಸಿದ್ದು ಎಂಬ ಆರೋಪದಂತೆ ಪೊಲೀಸರು ಕೇಸು ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next