Advertisement

Belthangady ಶಾಸಕ ಹರೀಶ್‌ ಪೂಂಜ ವಿರುದ್ಧ ದೂರು ದಾಖಲು

11:50 PM Oct 18, 2023 | Team Udayavani |

ಬೆಳ್ತಂಗಡಿ: ಕಳೆಂಜದ ಗ್ರಾಮದ ಅಮ್ಮಿನಡ್ಕ ಲೋಲಾಕ್ಷ ಅವರ ಮನೆ ಪಂಚಾಂಗ ತೆರವು ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಆರ್‌ಎಫ್ಒ ಕರ್ತವ್ಯಕ್ಕೆ ಅಡ್ಡಿಪಡಿಸಿದರೆಂದು ಆರೋಪಿಸಿ ತಡವಾಗಿ ಅರಣ್ಯಾಧಿಕಾರಿ ನೀಡಿದ ದೂರಿನಂತೆ ಶಾಸಕ ಹರೀಶ್‌ ಪೂಂಜ ಅವರ ಮೇಲೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಬಡವರ ಪರ ನಿಲ್ಲುವೆ: ಶಾಸಕ ಹರೀಶ್‌ ಪೂಂಜ
ನಾನು ಜೈಲಿಗೆ ಹೋದರೂ ಪರವಾಗಿಲ್ಲ, ಕೊನೆಯವರೆಗೂ ಬಡವರ ಪರವಾಗಿಯೇ ನಿಲ್ಲುತ್ತೇನೆ ಎಂದ ಶಾಸಕ ಹರೀಶ್‌ ಪೂಂಜ ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿಗಳ, ಅರಣ್ಯ ಸಚಿವರ ಈ ಬೆದರಿಕೆ ತಂತ್ರಗಳಿಗೆ ನಾನು ಬೆದರುವುದಿಲ್ಲ. ಮತ್ತೆ ಹೇಳುತ್ತಿದ್ದೇನೆ ಬಡವರಿಗಾಗಿ ಇಂತಹ ನೂರು ಕೇಸು ಹಾಕಿಸಿಕೊಳ್ಳುವುದಕ್ಕೂ ಸಿದ್ಧನಿದ್ದೇನೆ, ಜೈಲು ಸೇರಲೂ ತಯಾರಿದ್ದೇನೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next