Advertisement

Mangaluru; ಹಿಂದೂ ಧರ್ಮದ ಅವಹೇಳನ ಶಿಕ್ಷಕಿಯ ವಿರುದ್ಧ ದೂರು ದಾಖಲು

11:46 PM Feb 11, 2024 | Team Udayavani |

ಮಂಗಳೂರು: ತರಗತಿಯಲ್ಲಿ ಪಾಠ ಮಾಡುವಾಗ ಹಿಂದೂ ಧರ್ಮ ಮತ್ತು ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ರವಿವಾರ ದೂರು ದಾಖಲಾಗಿದೆ.

Advertisement

ಶಿಕ್ಷಕಿ ಫೆ.8ರಂದು “ವರ್ಕ್‌ ಈಸ್‌ ವರ್ಶಿಪ್‌’ ವಿಷಯದ ಪಾಠ ಮಾಡುತ್ತಿದ್ದಾಗ ಹಿಂದೂ ಧರ್ಮವನ್ನು ನಿಂದಿಸಿ ಮಕ್ಕಳಲ್ಲಿ ವ್ಯತಿರಿಕ್ತ ಭಾವನೆ ಮೂಡುವಂತೆ ಮಾಡಿದ್ದಾರೆ.

ಮಕ್ಕಳಲ್ಲಿ ಧರ್ಮದ ಬಗ್ಗೆ ವಿಷಬೀಜ ಬಿತ್ತುವ ಕೆಲಸ ಮಾಡಿದ್ದಾರೆ. ಹಿಂದೂ ಧರ್ಮದಿಂದ ಬೇರೆ ಧರ್ಮಕ್ಕೆ ಮತಾಂತರ ಮಾಡುವ ಹುನ್ನಾರ ಕೂಡ ಇದಾಗಿದೆ. ಶಿಕ್ಷಕಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next