Advertisement

ಮಾನನಷ್ಟ ಕೇಸ್‌ ಹಾಕಲಿ, ನೋಡ್ಕೊಳ್ತೇನೆ; ಬಿಎಸ್‌ವೈಗೆ ಸಿಎಂ ಸವಾಲು 

03:48 PM Sep 06, 2018 | |

ರಾಮನಗರ : ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿ ಯೂರಪ್ಪ ಪುತ್ರ ವಿಜಯೇಂದ್ರ ಆದಾಯ ತೆರಿಗೆ ಇಲಾಖೆಯ ಮುಖ್ಯ ಆಯುಕ್ತರನ್ನು ಭೇಟಿ ಮಾಡಿದ್ದಾರೆ ಎಂಬ ವಿಚಾರದಲ್ಲಿ  ಆರೋಪ- ಪ್ರತ್ಯಾರೋಪಗಳು ಮುಂದುವರಿದ್ದಿದ್ದು , ಮಾನನಷ್ಟ ಮೊಕದ್ದಮೆ ಹಾಕಿದರೆ ನೋಡಿಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬುಧವಾರ ಸವಾಲು ಹಾಕಿದ್ದಾರೆ.

Advertisement

ಕುಮಾರಸ್ವಾಮಿ ಅವರ ಆರೋಪದ ವಿರುದ್ದ ಕಿಡಿ ಕಾರಿರುವ ಯಡಿಯೂರಪ್ಪ ಅವರು ಹೇಳಿಕೆಯ ಕುರಿತು ಸಿಎಂ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ  ಮಾನನಷ್ಟ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಿರುವುದಾಗಿ ಎಚ್ಚರಿಕೆ ನೀಡಿದ್ದರು.ಮಾತ್ರವಲ್ಲದೆ ಅಧಿಕಾರಿಯನ್ನು ಭೇಟಿಯಾಗಿರುವುದನ್ನು ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಹೇಳಿದ್ದರು. 

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಏನು ನಷ್ಟವಾಗಿದೆ ? ಅದನ್ನು ಹಾಕಿಕೊಳ್ಳಲಿ.ಯಾವ ನಷ್ಟ ಬೇಕಾದರೂ ಹಾಕಿಕೊಳ್ಳಲಿ. ನಾನು ಆ ಬಳಿಕ ಮಾತನಾಡುತ್ತೇನೆ ಎಂದಿದ್ದಾರೆ. 

ಅವರು ಐಟಿ ಅಧಿಕಾರಿಗಳನ್ನು ಬಳಸಿಕೊಂಡಿರುವುದಲ್ಲಿ ಸಂಶಯ ಇದೆಯಾ? ನಾನು ಕದ್ದು ಹೋಗುವುದಿಲ್ಲ, ಪಲಾಯನ ಮಾಡುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ. 

ಈಗಾಗಲೇ ಯಾವುದೇ ರಾಜಕೀಯ ನಾಯಕರ ಕುಟುಂಬ ಸದಸ್ಯರು ನಮ್ಮ ಇಲಾಖೆಯ ಮುಖ್ಯ ಆಯುಕ್ತರನ್ನು ಭೇಟಿಯಾಗಿಲ್ಲ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next