Advertisement

ಕಂದಾಯ ಇಲಾಖೆಯಲ್ಲಿ ಕಡತ ವಿಲೇವಾರಿ ಸಪ್ತಾಹ

06:00 AM Nov 10, 2018 | |

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಒಂದು ವರ್ಷದಿಂದ ಇತ್ಯರ್ಥವಾಗದೇ ಉಳಿದಿರುವ ಕಡತಗಳ ವಿಲೇವಾರಿ ಮಾಡುವ ಉದ್ದೇಶದಿಂದ ನವೆಂಬರ್‌ 12ರಿಂದ 18 ರವರೆಗೆ ಕಡತ ವಿಲೇವಾರಿ ಸಪ್ತಾಹ ಆಚರಿಸಲು ತೀರ್ಮಾನಿಸಲಾಗಿದೆ. 

Advertisement

ನಿಗದಿತ ಅವಧಿಯಲ್ಲಿ ವಿಲೇವಾರಿ ಆಗದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ.

ಈ ಅವಧಿಯಲ್ಲಿ ಸಾಮಾನ್ಯ ಕಡತಗಳ ಜತೆಗೆ ಸಮಸ್ಯೆ ಇರುವ ಕಡತಗಳನ್ನು ಸಹ ವಿಲೇವಾರಿ ಮಾಡಲಾಗುವುದು. ಕಡತಗಳನ್ನು ಯಾವ ರೀತಿ ವಿಲೇವಾರಿ ಮಾಡಬೇಕೆಂಬ ಬಗ್ಗೆ ಪ್ರಾದೇಶಿಕ ಆಯುಕ್ತರು, ಇಲಾಖಾ ಮುಖ್ಯಸ್ಥರು ಮತ್ತು ಜಿಲ್ಲಾಧಿಕಾರಿಗಳು ತಮ್ಮ ಅಧೀನ ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನ ಮಾಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಸಪ್ತಾಹದ ಕೊನೆಯ ದಿನವಾದ ನ.18 ರಂದು ಸಂಬಂಧಿಸಿದ ಎಲ್ಲ ಅಧಿಕಾರಿಗಳೂ 7 ದಿನಗಳಲ್ಲಿ ಎಷ್ಟು ಕಡತ ವಿಲೇವಾರಿ ಮಾಡಲಾಗಿದೆ. ನ.12ಕ್ಕೂ ಮುಂಚೆ ಇದ್ದ ಕಡತಗಳ ಸಂಖ್ಯೆ ಹಾಗೂ ಹಾಲಿ ವಿಲೇವಾರಿ ನಂತರ ಉಳಿದಿರುವ ಕಡತಗಳ ಸಂಖ್ಯೆ ಬಗ್ಗೆ ಸಂಪೂರ್ಣ ಮಾಹಿತಿ ಕಡ್ಡಾಯವಾಗಿ “rve@karnataka.gov.inಗೆ ನೀಡಬೇಕು ಎಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next