Advertisement

ಹೈಕಮಾಂಡ್‌ ಸೂಚನೆ ಮೇರೆಗೆ ನಾಮಪತ್ರ ಸಲ್ಲಿಕೆ: ಶ್ರೀರಾಮುಲು

06:00 AM Apr 25, 2018 | Team Udayavani |

ಬಾಗಲಕೋಟೆ: “ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ಹೈಕಮಾಂಡ್‌ ಏನು ಹೇಳುತ್ತದೆಯೋ ಅದನ್ನು ಪಾಲಿಸುತ್ತೇನೆ. ಬಾದಾಮಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲು ಸೂಚಿಸಿದೆ. ಹೀಗಾಗಿ, ನಾಮಪತ್ರ ಸಲ್ಲಿಸಿದ್ದೇನೆ’ ಎಂದು ಸಂಸದ ಬಿ. ಶ್ರೀರಾಮುಲು ತಿಳಿಸಿದ್ದಾರೆ.

Advertisement

ಬಾದಾಮಿ ತಹಶೀಲ್ದಾರ್‌ ಕಚೇರಿಯಲ್ಲಿ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಯಾವುದೇ ಲೆಕ್ಕಾಚಾರ ಹಾಕಿ ರಾಜಕಾರಣ ಮಾಡುವ ವ್ಯಕ್ತಿಗಳಲ್ಲ. ಬಾದಾಮಿ ಕ್ಷೇತ್ರ ಮೊದಲಿನಿಂದಲೂ ಬಿಜೆಪಿಗೆ ಗಟ್ಟಿ ನೆಲ. ಬಾದಾಮಿ ಬನಶಂಕರಿ ದೇವಿಯ ಆಶೀರ್ವಾದದ ಜತೆಗೆ ಎಲ್ಲರ ಆಶೀರ್ವಾದದಿಂದ ಬಿಜೆಪಿ ಗೆಲುವು ಸಾಧಿಸಲಿದೆ. ಬಾದಾಮಿ ಕ್ಷೇತ್ರದಲ್ಲಿ ಇದೊಂದು ಮಹಾ ಯುದಟಛಿ. ಈ ಯುದ್ಧದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಾದಾಮಿನೂ ಇಲ್ಲ, ಚಾಮುಂಡೇಶ್ವರಿನೂ ಇಲ್ಲ. ಅವರ ಸೋಲು ಖಚಿತ.
● ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ 

ಸಿಎಂಗೆ ಬಾದಾಮಿನೂ ಸಿಗಲ್ಲ, ಗೋಡಂಬಿನೂ ಇಲ್ಲ: ಶೆಟ್ಟರ್‌
ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುವ ಭೀತಿಯಿಂದ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ. ಇಲ್ಲಿ ಬಾದಾಮಿ ಹುಡುಕಲು ಅವರು ಬಂದಿದ್ದು, ಅವರಿಗೆ ಬಾದಾಮಿನೂ ಸಿಗಲ್ಲ. ಗೋಡಂಬಿನೂ ಸಿಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಒಬ್ಬ ಪಲಾಯನವಾದಿ. ಮೈಸೂರಿನಲ್ಲಿ ಸೋಲುವ ಭಯದಿಂದ ಬಾದಾಮಿಗೆ ಬಂದಿದ್ದಾರೆ. ಅವರಿಗೆ ಅಲ್ಲಿ ಚಾಮುಂಡೇಶ್ವರಿ ಮತ್ತು ಇಲ್ಲಿ ಬನಶಂಕರಿ ಆಶೀರ್ವಾದ ಸಿಗಲ್ಲ. ಬಾದಾಮಿ ಹುಡುಕಲು ಬಂದಿರುವ ಸಿಎಂಗೆ ಇಲ್ಲಿ ಬಾದಾಮಿ, ದ್ರಾಕ್ಷಿ, ಗೋಡಂಬಿ ಯಾವುದೂ ಸಿಗಲ್ಲ. ಸಿಎಂಗೆ ಈ ಚುನಾವಣೆ ಅಧೋಗತಿ ಎಂಬುದು ಅವರೇ ತಿಳಿದುಕೊಳ್ಳಬೇಕು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಗಾದರೂ ಮಾಡಿ ಈ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಉದ್ದೇಶದಿಂದ ಕ್ಷೇತ್ರದಿಂದ ಕ್ಷೇತ್ರಕ್ಕೆ ಅಲೆದಾಡುತ್ತಿದ್ದಾರೆ. ಇಲ್ಲಿಯೂ ಬನಶಂಕರಿ ದೇವಿ ಅವರಿಗೆ ಆಶೀರ್ವಾದ ಮಾಡುವುದಿಲ್ಲ.
● ಪ್ರಕಾಶ ಜಾವಡೇಕರ್‌, ಕೇಂದ್ರ ಸಚಿವ

Advertisement
Advertisement

Udayavani is now on Telegram. Click here to join our channel and stay updated with the latest news.

Next