Advertisement

ನಿರಂಜನಕುಮಾರ್ ಪರ ನಟ ಕಿಚ್ಚ‌‌ ಸುದೀಪ್ ರೋಡ್ ಶೋ ನಡೆಸಿ ಅಬ್ಬರದ ಪ್ರಚಾರ

12:28 PM May 05, 2023 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಎಸ್.ನಿರಂಜನಕುಮಾರ್ ಪರ ಚಿತ್ರನಟ ಕಿಚ್ಚ‌ ಸುದೀಪ್ ರೋಡ್ ಶೋ ನಡೆಸುವ ಮೂಲಕ ಅಬ್ಬರದ ಪ್ರಚಾರ ನಡೆಸಿದರು.

Advertisement

ಪಟ್ಟಣದ ಮಡಹಳ್ಳಿ ವೃತ್ತದ ಬಳಿ ಆಗಮಿಸಿದ ಕಿಚ್ಚ ಸುದೀಪ್ ಅವರನ್ನು ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್ ಮತ್ತು ಪುರಸಭಾ ಅಧ್ಯಕ್ಷ ಪಿ.ಗಿರೀಶ್ ಸ್ವಾಗತಿಸಿ ಬರಮಾಡಿಕೊಂಡರು. ನಟ ಸುದೀಪ್ ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣ ಸ್ವಾಮಿ ಅವರೊಟ್ಟಿಗೆ ತೆರೆದ ಪ್ರಚಾರ ವಾಹನ ವೇರುತ್ತಿದ್ದಂತೆ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಕೇಕೆ, ಶಿಳ್ಳೆ, ಚಪ್ಪಾಳೆ ಹಾಕುವ ಮೂಲಕ ಸಂಭ್ರಮಿಸಿದರು.

ಈ ವೇಳೆ ಮಾತನಾಡಿದ ಚಿತ್ರನಟ ಕಿಚ್ಚ ಸುದೀಪ್, ಗೆದ್ದೆ ಗೆಲ್ಲೆವೆವು ನಾವು ಒಂದು ದಿನ- ಗೆಲ್ಲಲೇಬೇಕು ಒಳ್ಳೆತನ ಎಂದು ಹೇಳುವ ಮೂಲಕ ಸತತವಾಗಿ ಸೋತರು ಗೆದ್ದ ನಿರಂಜನಕುಮಾರ್ ಈ ಬಾರಿಯೂ ಗೆಲ್ಲಿಸಿಕೊಡಬೇಕೆಂದು ಮನವಿ ಮಾಡಿದರು.

ನಾನು ಚಿತ್ರರಂಗದಲ್ಲಿ ಇವತ್ತು ಸಹ ಬಣ್ಣಹಚ್ಚಲು ನಿಮ್ಮ ಈ ಪ್ರೀತಿ ಅಭಿಮಾನವೇ ಕಾರಣ ನಿಮ್ಮ ಈ ಋಣವನ್ನ ನಾನೆಂದಿಗೂ ತೀರಿಸಲು ಸಾಧ್ಯವಿಲ್ಲ. ನಿಮ್ಮ ಈ ಜಯಘೋಷಗಳನ್ನ ಸಹೋದರ ನಿರಂಜನ್ ಗೆಲುವಿನಲ್ಲಿ ಕೇಳಲು ಬಯಸುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದರು.

ರೋಡ್ ಶೋ ವೇಳೆ ನೆರೆದಿದ್ದ ಸಾವಿರಾರು ಅಭಿಮಾನಿಗಳು ಕಿಚ್ಚ ಕಿಚ್ಚ ಎಂದು ಘೋಷಣೆ ಕೂಗಿದರು. ಈ ವೇಳೆ ಸುದೀಪ್ ವೀರ ಮದಕರಿ ಎಂದು ಸಿನಿಮಾ ಡೈಲಾಗ್ ಹೊಡೆದು ಅಭಿಮಾನಿಗಳನ್ನು ಹುಚ್ಚೆಬ್ಬಿಸಿದ್ದರು‌.

Advertisement

ಮಡಹಳ್ಳಿ ವೃತ್ತದಿಂದ ಆರಂಭವಾದ ರೋಡ್ ಶೋ ಹಳೇ ಬಸ್ ನಿಲ್ದಾಣದಲ್ಲಿ ಅಂತ್ಯಗೊಂಡಿತು. ವಾಹನದಿಂದ ಸುದೀಪ್ ಕೆಳಗಿಳಿಯುತ್ತಿದ್ದಂತೆ ನೂಕುನುಗ್ಗಲು ಉಂಟಾಯಿತು. ಈ ವೇಳೆ ಜನರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದರು.

Advertisement

Udayavani is now on Telegram. Click here to join our channel and stay updated with the latest news.

Next